ತಿಪ್ಪೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಬಹುಮತ ಪಡೆಯುವ ಮೂಲಕ ಸಂಘದ ಅಧಿಕಾರ ಚುಕ್ಕಾಣಿ ಹಿಡಿದಿದ್ದಾರೆ, 13 ನಿರ್ದೇಶಕರುಗಳ ಸ್ಥಾನಗಳಲ್ಲಿ 8 ಸ್ಥಾನ ಪಡೆದ ಮೈತ್ರಿಕೂಟ ಅಧಿಕಾರವನ್ನ ಹಿಡಿದಿದೆ.
ತಿಪ್ಪೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತಕ್ಕೆ ಭಾನುವಾರದಂದ್ದು ಚುನಾವಣೆ ನಡೆದಿದ್ದು, 13 ಸ್ಥಾನಗಳ ನಿರ್ದೇಶಕರ ಮಂಡಳಿಯಲ್ಲಿ ಪರಿಶಿಷ್ಟ ಜಾತಿ ಕೋಟದಲ್ಲಿ ಸ್ಪರ್ಧಿಸಿದ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದ 12 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಮೈತ್ರಿಯೊಂದಿಗೆ ಸ್ಪರ್ಧಿಸಿದ್ದರು.
ಪರಿಶಿಷ್ಟ ಜಾತಿ ಕೋಟದಲ್ಲಿ ಸ್ಪರ್ಧಿಸಿದ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದು, ಇನ್ನುಳಿದ 12 ಸ್ಥಾನಗಳಿ ನಡೆದ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಲ್ಲಿ ರಾಜಣ್ಣ.ಟಿ, ಟಿ.ಆರ್.ನಟರಾಜ್, ಅಶೋಕ್, ಅಂಬರೀಶ್, ಲೋಕೇಶ್, ಟಿ.ಡಿ.ಆನಂದ್, ಕೃಷ್ಣಮೂರ್ತಿ, ಮಹಿಳಾ ಮೀಸಲು ಸ್ಥಾನದಲ್ಲಿ ಅನಸೂಯಮ್ಮ, ರತ್ನಮ್ಮ, ಹಿಂದುಳಿದ ವರ್ಗ ಎ ಸ್ಥಾನದಲ್ಲಿ ಕುಮಾರ್ ಎಂ, ಹಿಂದುಳಿದ ವರ್ಗ ಬಿ ಸ್ಥಾನದಲ್ಲಿ ಪಿ.ರಾಜಣ್ಣ, ಪರಿಶಿಷ್ಟ ಪಂಗಡ ಕೋಟಾದಲ್ಲಿ ಗಂಗಾಧರ್ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ವಿಚೇತರಾದ ನಿರ್ದೇಶಕರನ್ನ ಅಭಿನಂದಿಸಲಾಗಿತು, ಈ ವೇಳೆ ತಿಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚನ್ನರಾಮಯ್ಯ, ಗ್ರಾಮ ಪಂಚಾಯತ್ ಸದಸ್ಯರಾದ ನರಸಿಂಹಯ್ಯ, ಹನುಮಂತಪ್ಪ, ಮಾಜಿ ಗ್ರಾಮ ಪಂಚಾಯತ್ ಉಪಾದ್ಯಕ್ಷರಾದ ಟಿ.ಡಿ.ಮುನಿಯಪ್ಪ, ಮಾಜಿ ಗ್ರಾಮ ಪಂಚಯತ್ ಸದ್ಯಸರಾದ ಸಂತೋಷ್. ಬಿಜೆಪಿ ಮುಖಂಡರಾದ ಸೂರ್ಯನಾರಾಯಣಗೌಡ, ಗ್ರಾಮದ ಮುಖಂಡರಾದ ಸಿದ್ದಪ್ಪ, ಅರೇಹನುಮಯ್ಯ, ನರೇಂದ್ರ, ಖುಷ್ ಕುಮಾರ್ ಇದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…