ತಿಪ್ಪೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಬಹುಮತ ಪಡೆಯುವ ಮೂಲಕ ಸಂಘದ ಅಧಿಕಾರ ಚುಕ್ಕಾಣಿ ಹಿಡಿದಿದ್ದಾರೆ, 13 ನಿರ್ದೇಶಕರುಗಳ ಸ್ಥಾನಗಳಲ್ಲಿ 8 ಸ್ಥಾನ ಪಡೆದ ಮೈತ್ರಿಕೂಟ ಅಧಿಕಾರವನ್ನ ಹಿಡಿದಿದೆ.
ತಿಪ್ಪೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತಕ್ಕೆ ಭಾನುವಾರದಂದ್ದು ಚುನಾವಣೆ ನಡೆದಿದ್ದು, 13 ಸ್ಥಾನಗಳ ನಿರ್ದೇಶಕರ ಮಂಡಳಿಯಲ್ಲಿ ಪರಿಶಿಷ್ಟ ಜಾತಿ ಕೋಟದಲ್ಲಿ ಸ್ಪರ್ಧಿಸಿದ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದ 12 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಮೈತ್ರಿಯೊಂದಿಗೆ ಸ್ಪರ್ಧಿಸಿದ್ದರು.
ಪರಿಶಿಷ್ಟ ಜಾತಿ ಕೋಟದಲ್ಲಿ ಸ್ಪರ್ಧಿಸಿದ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದು, ಇನ್ನುಳಿದ 12 ಸ್ಥಾನಗಳಿ ನಡೆದ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಲ್ಲಿ ರಾಜಣ್ಣ.ಟಿ, ಟಿ.ಆರ್.ನಟರಾಜ್, ಅಶೋಕ್, ಅಂಬರೀಶ್, ಲೋಕೇಶ್, ಟಿ.ಡಿ.ಆನಂದ್, ಕೃಷ್ಣಮೂರ್ತಿ, ಮಹಿಳಾ ಮೀಸಲು ಸ್ಥಾನದಲ್ಲಿ ಅನಸೂಯಮ್ಮ, ರತ್ನಮ್ಮ, ಹಿಂದುಳಿದ ವರ್ಗ ಎ ಸ್ಥಾನದಲ್ಲಿ ಕುಮಾರ್ ಎಂ, ಹಿಂದುಳಿದ ವರ್ಗ ಬಿ ಸ್ಥಾನದಲ್ಲಿ ಪಿ.ರಾಜಣ್ಣ, ಪರಿಶಿಷ್ಟ ಪಂಗಡ ಕೋಟಾದಲ್ಲಿ ಗಂಗಾಧರ್ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ವಿಚೇತರಾದ ನಿರ್ದೇಶಕರನ್ನ ಅಭಿನಂದಿಸಲಾಗಿತು, ಈ ವೇಳೆ ತಿಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚನ್ನರಾಮಯ್ಯ, ಗ್ರಾಮ ಪಂಚಾಯತ್ ಸದಸ್ಯರಾದ ನರಸಿಂಹಯ್ಯ, ಹನುಮಂತಪ್ಪ, ಮಾಜಿ ಗ್ರಾಮ ಪಂಚಾಯತ್ ಉಪಾದ್ಯಕ್ಷರಾದ ಟಿ.ಡಿ.ಮುನಿಯಪ್ಪ, ಮಾಜಿ ಗ್ರಾಮ ಪಂಚಯತ್ ಸದ್ಯಸರಾದ ಸಂತೋಷ್. ಬಿಜೆಪಿ ಮುಖಂಡರಾದ ಸೂರ್ಯನಾರಾಯಣಗೌಡ, ಗ್ರಾಮದ ಮುಖಂಡರಾದ ಸಿದ್ದಪ್ಪ, ಅರೇಹನುಮಯ್ಯ, ನರೇಂದ್ರ, ಖುಷ್ ಕುಮಾರ್ ಇದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…