ತಿಪ್ಪೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಬಹುಮತ ಪಡೆಯುವ ಮೂಲಕ ಸಂಘದ ಅಧಿಕಾರ ಚುಕ್ಕಾಣಿ ಹಿಡಿದಿದ್ದಾರೆ, 13 ನಿರ್ದೇಶಕರುಗಳ ಸ್ಥಾನಗಳಲ್ಲಿ 8 ಸ್ಥಾನ ಪಡೆದ ಮೈತ್ರಿಕೂಟ ಅಧಿಕಾರವನ್ನ ಹಿಡಿದಿದೆ.
ತಿಪ್ಪೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತಕ್ಕೆ ಭಾನುವಾರದಂದ್ದು ಚುನಾವಣೆ ನಡೆದಿದ್ದು, 13 ಸ್ಥಾನಗಳ ನಿರ್ದೇಶಕರ ಮಂಡಳಿಯಲ್ಲಿ ಪರಿಶಿಷ್ಟ ಜಾತಿ ಕೋಟದಲ್ಲಿ ಸ್ಪರ್ಧಿಸಿದ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದ 12 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಮೈತ್ರಿಯೊಂದಿಗೆ ಸ್ಪರ್ಧಿಸಿದ್ದರು.
ಪರಿಶಿಷ್ಟ ಜಾತಿ ಕೋಟದಲ್ಲಿ ಸ್ಪರ್ಧಿಸಿದ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದು, ಇನ್ನುಳಿದ 12 ಸ್ಥಾನಗಳಿ ನಡೆದ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಲ್ಲಿ ರಾಜಣ್ಣ.ಟಿ, ಟಿ.ಆರ್.ನಟರಾಜ್, ಅಶೋಕ್, ಅಂಬರೀಶ್, ಲೋಕೇಶ್, ಟಿ.ಡಿ.ಆನಂದ್, ಕೃಷ್ಣಮೂರ್ತಿ, ಮಹಿಳಾ ಮೀಸಲು ಸ್ಥಾನದಲ್ಲಿ ಅನಸೂಯಮ್ಮ, ರತ್ನಮ್ಮ, ಹಿಂದುಳಿದ ವರ್ಗ ಎ ಸ್ಥಾನದಲ್ಲಿ ಕುಮಾರ್ ಎಂ, ಹಿಂದುಳಿದ ವರ್ಗ ಬಿ ಸ್ಥಾನದಲ್ಲಿ ಪಿ.ರಾಜಣ್ಣ, ಪರಿಶಿಷ್ಟ ಪಂಗಡ ಕೋಟಾದಲ್ಲಿ ಗಂಗಾಧರ್ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ವಿಚೇತರಾದ ನಿರ್ದೇಶಕರನ್ನ ಅಭಿನಂದಿಸಲಾಗಿತು, ಈ ವೇಳೆ ತಿಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚನ್ನರಾಮಯ್ಯ, ಗ್ರಾಮ ಪಂಚಾಯತ್ ಸದಸ್ಯರಾದ ನರಸಿಂಹಯ್ಯ, ಹನುಮಂತಪ್ಪ, ಮಾಜಿ ಗ್ರಾಮ ಪಂಚಾಯತ್ ಉಪಾದ್ಯಕ್ಷರಾದ ಟಿ.ಡಿ.ಮುನಿಯಪ್ಪ, ಮಾಜಿ ಗ್ರಾಮ ಪಂಚಯತ್ ಸದ್ಯಸರಾದ ಸಂತೋಷ್. ಬಿಜೆಪಿ ಮುಖಂಡರಾದ ಸೂರ್ಯನಾರಾಯಣಗೌಡ, ಗ್ರಾಮದ ಮುಖಂಡರಾದ ಸಿದ್ದಪ್ಪ, ಅರೇಹನುಮಯ್ಯ, ನರೇಂದ್ರ, ಖುಷ್ ಕುಮಾರ್ ಇದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…