ತಿಪ್ಪೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಬಹುಮತ ಪಡೆಯುವ ಮೂಲಕ ಸಂಘದ ಅಧಿಕಾರ ಚುಕ್ಕಾಣಿ ಹಿಡಿದಿದ್ದಾರೆ, 13 ನಿರ್ದೇಶಕರುಗಳ ಸ್ಥಾನಗಳಲ್ಲಿ 8 ಸ್ಥಾನ ಪಡೆದ ಮೈತ್ರಿಕೂಟ ಅಧಿಕಾರವನ್ನ ಹಿಡಿದಿದೆ.
ತಿಪ್ಪೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತಕ್ಕೆ ಭಾನುವಾರದಂದ್ದು ಚುನಾವಣೆ ನಡೆದಿದ್ದು, 13 ಸ್ಥಾನಗಳ ನಿರ್ದೇಶಕರ ಮಂಡಳಿಯಲ್ಲಿ ಪರಿಶಿಷ್ಟ ಜಾತಿ ಕೋಟದಲ್ಲಿ ಸ್ಪರ್ಧಿಸಿದ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದ 12 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಮೈತ್ರಿಯೊಂದಿಗೆ ಸ್ಪರ್ಧಿಸಿದ್ದರು.
ಪರಿಶಿಷ್ಟ ಜಾತಿ ಕೋಟದಲ್ಲಿ ಸ್ಪರ್ಧಿಸಿದ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದು, ಇನ್ನುಳಿದ 12 ಸ್ಥಾನಗಳಿ ನಡೆದ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಲ್ಲಿ ರಾಜಣ್ಣ.ಟಿ, ಟಿ.ಆರ್.ನಟರಾಜ್, ಅಶೋಕ್, ಅಂಬರೀಶ್, ಲೋಕೇಶ್, ಟಿ.ಡಿ.ಆನಂದ್, ಕೃಷ್ಣಮೂರ್ತಿ, ಮಹಿಳಾ ಮೀಸಲು ಸ್ಥಾನದಲ್ಲಿ ಅನಸೂಯಮ್ಮ, ರತ್ನಮ್ಮ, ಹಿಂದುಳಿದ ವರ್ಗ ಎ ಸ್ಥಾನದಲ್ಲಿ ಕುಮಾರ್ ಎಂ, ಹಿಂದುಳಿದ ವರ್ಗ ಬಿ ಸ್ಥಾನದಲ್ಲಿ ಪಿ.ರಾಜಣ್ಣ, ಪರಿಶಿಷ್ಟ ಪಂಗಡ ಕೋಟಾದಲ್ಲಿ ಗಂಗಾಧರ್ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ವಿಚೇತರಾದ ನಿರ್ದೇಶಕರನ್ನ ಅಭಿನಂದಿಸಲಾಗಿತು, ಈ ವೇಳೆ ತಿಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚನ್ನರಾಮಯ್ಯ, ಗ್ರಾಮ ಪಂಚಾಯತ್ ಸದಸ್ಯರಾದ ನರಸಿಂಹಯ್ಯ, ಹನುಮಂತಪ್ಪ, ಮಾಜಿ ಗ್ರಾಮ ಪಂಚಾಯತ್ ಉಪಾದ್ಯಕ್ಷರಾದ ಟಿ.ಡಿ.ಮುನಿಯಪ್ಪ, ಮಾಜಿ ಗ್ರಾಮ ಪಂಚಯತ್ ಸದ್ಯಸರಾದ ಸಂತೋಷ್. ಬಿಜೆಪಿ ಮುಖಂಡರಾದ ಸೂರ್ಯನಾರಾಯಣಗೌಡ, ಗ್ರಾಮದ ಮುಖಂಡರಾದ ಸಿದ್ದಪ್ಪ, ಅರೇಹನುಮಯ್ಯ, ನರೇಂದ್ರ, ಖುಷ್ ಕುಮಾರ್ ಇದ್ದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…