ತಿಮ್ಮಸಂದ್ರ ಗ್ರಾಮದಲ್ಲಿ ವಿಶೇಷ ವಿನ್ಯಾಸದ ಗೋಲ್ ಗುಂಬಜ್ ಮಾದರಿಯ ಅಂಗನವಾಡಿ ಕಟ್ಟಡ ಉದ್ಘಾಟನೆ

ಮಕ್ಕಳ ಕಲಿಕೆಯ ಬುನಾದಿಗೆ ಅಂಗನವಾಡಿಗಳು ಪೂರಕವಾಗಿರುವುದರಿಂದ ಇವುಗಳ ಮೂಲ ಸೌಕರ್ಯಕ್ಕೆ ಒತ್ತು ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ಎಜಾಕ್ಸ್ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸಿಎಸ್‌ಆರ್ ಅನುದಾನದಲ್ಲಿ ನಿರ್ಮಿಸಲಾಗಿರುವ ವಿಶೇಷ ವಿನ್ಯಾಸದ ಗೋಲ್ ಗುಂಬಜ್ ಮಾದರಿಯ ಅಂಗನವಾಡಿ ಕಟ್ಟಡ ಹಾಗೂ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.

ಈ ಅಂಗನವಾಡಿ ನೂತನ ಕಟ್ಟಡವು ವಿಶೇಷವಾಗಿದ್ದು, ವಿನೂತನವಾದ ಡೂಮ್ ಮಾದರಿಯಲ್ಲಿ ನಿರ್ಮಿಸಲಾಗಿದೆ. ಕಟ್ಟಡದ ಒಳಗೆ ಆಹ್ಲಾದಕರ ವಾತಾವರಣದಿಂದ ಕೂಡಿದ್ದು ಮಕ್ಕಳು ಕಲಿಯಲು ಪೂರಕವಾದ ಅವಕಾಶ‌ವನ್ನು ಕಲ್ಪಿಸಲಾಗಿದೆ ಎಂದರು.

ಏಜಾಕ್ಸ್ ಕಂಪನಿಯು ಸಾಮಾಜಿಕವಾಗಿ ಉತ್ತಮವಾದ ಕಾರ್ಯವನ್ನು ನಿರ್ವಹಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಯವರು ಶಾಲೆಯ ಕೊಠಡಿ ನಿರ್ಮಾಣವು ಕೂಡ ಗುಣಮಟ್ಟದಿಂದ ಕೂಡಿದೆ ಎಂದರು.

ಕಂಪನಿಯವರು ನೀಡಿರುವ ಈ ಕಟ್ಟಡವನ್ನು ಶಾಲೆಯ ಶಿಕ್ಷಕರು ಹಾಗೂ ಗ್ರಾಮಸ್ಥರು ಸರಿಯಾದ ರೀತಿಯಲ್ಲಿ ನಿರ್ವಹಿಸಿ, ಮತ್ತಷ್ಟು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಾಪಾಡಿಕೊಳ್ಳಿ. ಮಕ್ಕಳು ಸಮಾಜದಲ್ಲಿ ಉತ್ತಮ ನಾಗರಿಕನಾಗಲು ಪೋಷಕರು ಮಾನವೀಯ ಮೌಲ್ಯಗಳನ್ನು ಬಾಲ್ಯದಲ್ಲೇ ಕಲಿಸಿ ಎಂದರು.

ನಂತರ ಶಾಸಕರಾದ ಟಿ.ವೆಂಕಟರಾಮಣಯ್ಯ ಮಾತನಾಡಿ, ಏಜಾಕ್ಸ್ ಕಂಪನಿಯ ಸಾಮಾಜಿಕ ಜವಾಬ್ಧಾರಿಯ ಸಹಕಾರದಿಂದ ನೂತನ ಕಟ್ಟಡವನ್ನು ನಿರ್ಮಿಸಿರುವುದು ಶ್ಲಾಘನೀಯವಾದದ್ದು. ಕೋವಿಡ್ ಸಂದರ್ಭದಲ್ಲಿ ಮೂರೂವರೆ ಕೋಟಿ ವೆಚ್ಚದ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ನಿರ್ಮಿಸಿಕೊಟ್ಟಿದ್ದಾರೆ, ಅಲ್ಲದೆ ಶಾಲಾ ಕಟ್ಟಡವನ್ನು ಸಹಾ ನಿರ್ಮಿಸಿದ್ದಾರೆ, ಇದೇ ರೀತಿ ಗ್ರಾಮೀಣ ಪ್ರದೇಶಗಳಿಗೂ ಹೆಚ್ಚಿನ ಆದ್ಯತೆ ನೀಡಿ ತಮ್ಮ ಸಾಮಾಜಿಕ ಕಾರ್ಯ ಮುಂದುವರೆಸಿ ಎಂದರು.

ಎಲ್ಲಾ ಸರ್ಕಾರಗಳು ಈ ಹಿಂದಿನಿಂದಲೂ ಶಿಕ್ಷಣಕ್ಕೆ ಮಹತ್ವ ನೀಡುತ್ತಿವೆ. ಸರ್ಕಾರಿ ಶಾಲೆಗಳು ಉತ್ತಮ ಶಿಕ್ಷಣವನ್ನು ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳತ್ತ ಮುಖ ಮಾಡದೇ ಹೆಮ್ಮೆಯಿಂದ ಸರಕಾರಿ ಶಾಲೆಗೆ ದಾಖಲಿಸಿ. ಸರ್ಕಾರಿ ಶಾಲೆಯ ಶಿಕ್ಷಕರು ಮೆರಿಟ್ ಆಧಾರದ ಮೇಲೆ ನೇಮಕವಾಗಿರುತ್ತಾರೆ. ಹಾಗಾಗಿ ಮಕ್ಕಳಿಗೆ ಕಲಿಯಲು ತುಂಬಾ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಟರಾಜ್, ದೊಡ್ಡಬಳ್ಳಾಪುರ ತಹಶೀಲ್ದಾರ್ ಮೋಹನ್ ಕುಮಾರಿ, ಸಿಡಿಪಿಓ ಅನಿತಾಕುಮಾರಿ, ಅಜಾಕ್ಸ್ ಕಂಪನಿಯ ಹೆಚ್.ಆರ್.ಗಣಪತಿ, ಸಿ.ಎಸ್.ಆರ್. ಅಧಿಕಾರಿ ಮಂಜುನಾಥ್ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

4 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago