ತಿಮ್ಮಸಂದ್ರ ಗ್ರಾಮದಲ್ಲಿ ವಿಶೇಷ ವಿನ್ಯಾಸದ ಗೋಲ್ ಗುಂಬಜ್ ಮಾದರಿಯ ಅಂಗನವಾಡಿ ಕಟ್ಟಡ ಉದ್ಘಾಟನೆ

ಮಕ್ಕಳ ಕಲಿಕೆಯ ಬುನಾದಿಗೆ ಅಂಗನವಾಡಿಗಳು ಪೂರಕವಾಗಿರುವುದರಿಂದ ಇವುಗಳ ಮೂಲ ಸೌಕರ್ಯಕ್ಕೆ ಒತ್ತು ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ಎಜಾಕ್ಸ್ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸಿಎಸ್‌ಆರ್ ಅನುದಾನದಲ್ಲಿ ನಿರ್ಮಿಸಲಾಗಿರುವ ವಿಶೇಷ ವಿನ್ಯಾಸದ ಗೋಲ್ ಗುಂಬಜ್ ಮಾದರಿಯ ಅಂಗನವಾಡಿ ಕಟ್ಟಡ ಹಾಗೂ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.

ಈ ಅಂಗನವಾಡಿ ನೂತನ ಕಟ್ಟಡವು ವಿಶೇಷವಾಗಿದ್ದು, ವಿನೂತನವಾದ ಡೂಮ್ ಮಾದರಿಯಲ್ಲಿ ನಿರ್ಮಿಸಲಾಗಿದೆ. ಕಟ್ಟಡದ ಒಳಗೆ ಆಹ್ಲಾದಕರ ವಾತಾವರಣದಿಂದ ಕೂಡಿದ್ದು ಮಕ್ಕಳು ಕಲಿಯಲು ಪೂರಕವಾದ ಅವಕಾಶ‌ವನ್ನು ಕಲ್ಪಿಸಲಾಗಿದೆ ಎಂದರು.

ಏಜಾಕ್ಸ್ ಕಂಪನಿಯು ಸಾಮಾಜಿಕವಾಗಿ ಉತ್ತಮವಾದ ಕಾರ್ಯವನ್ನು ನಿರ್ವಹಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಯವರು ಶಾಲೆಯ ಕೊಠಡಿ ನಿರ್ಮಾಣವು ಕೂಡ ಗುಣಮಟ್ಟದಿಂದ ಕೂಡಿದೆ ಎಂದರು.

ಕಂಪನಿಯವರು ನೀಡಿರುವ ಈ ಕಟ್ಟಡವನ್ನು ಶಾಲೆಯ ಶಿಕ್ಷಕರು ಹಾಗೂ ಗ್ರಾಮಸ್ಥರು ಸರಿಯಾದ ರೀತಿಯಲ್ಲಿ ನಿರ್ವಹಿಸಿ, ಮತ್ತಷ್ಟು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಾಪಾಡಿಕೊಳ್ಳಿ. ಮಕ್ಕಳು ಸಮಾಜದಲ್ಲಿ ಉತ್ತಮ ನಾಗರಿಕನಾಗಲು ಪೋಷಕರು ಮಾನವೀಯ ಮೌಲ್ಯಗಳನ್ನು ಬಾಲ್ಯದಲ್ಲೇ ಕಲಿಸಿ ಎಂದರು.

ನಂತರ ಶಾಸಕರಾದ ಟಿ.ವೆಂಕಟರಾಮಣಯ್ಯ ಮಾತನಾಡಿ, ಏಜಾಕ್ಸ್ ಕಂಪನಿಯ ಸಾಮಾಜಿಕ ಜವಾಬ್ಧಾರಿಯ ಸಹಕಾರದಿಂದ ನೂತನ ಕಟ್ಟಡವನ್ನು ನಿರ್ಮಿಸಿರುವುದು ಶ್ಲಾಘನೀಯವಾದದ್ದು. ಕೋವಿಡ್ ಸಂದರ್ಭದಲ್ಲಿ ಮೂರೂವರೆ ಕೋಟಿ ವೆಚ್ಚದ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ನಿರ್ಮಿಸಿಕೊಟ್ಟಿದ್ದಾರೆ, ಅಲ್ಲದೆ ಶಾಲಾ ಕಟ್ಟಡವನ್ನು ಸಹಾ ನಿರ್ಮಿಸಿದ್ದಾರೆ, ಇದೇ ರೀತಿ ಗ್ರಾಮೀಣ ಪ್ರದೇಶಗಳಿಗೂ ಹೆಚ್ಚಿನ ಆದ್ಯತೆ ನೀಡಿ ತಮ್ಮ ಸಾಮಾಜಿಕ ಕಾರ್ಯ ಮುಂದುವರೆಸಿ ಎಂದರು.

ಎಲ್ಲಾ ಸರ್ಕಾರಗಳು ಈ ಹಿಂದಿನಿಂದಲೂ ಶಿಕ್ಷಣಕ್ಕೆ ಮಹತ್ವ ನೀಡುತ್ತಿವೆ. ಸರ್ಕಾರಿ ಶಾಲೆಗಳು ಉತ್ತಮ ಶಿಕ್ಷಣವನ್ನು ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳತ್ತ ಮುಖ ಮಾಡದೇ ಹೆಮ್ಮೆಯಿಂದ ಸರಕಾರಿ ಶಾಲೆಗೆ ದಾಖಲಿಸಿ. ಸರ್ಕಾರಿ ಶಾಲೆಯ ಶಿಕ್ಷಕರು ಮೆರಿಟ್ ಆಧಾರದ ಮೇಲೆ ನೇಮಕವಾಗಿರುತ್ತಾರೆ. ಹಾಗಾಗಿ ಮಕ್ಕಳಿಗೆ ಕಲಿಯಲು ತುಂಬಾ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಟರಾಜ್, ದೊಡ್ಡಬಳ್ಳಾಪುರ ತಹಶೀಲ್ದಾರ್ ಮೋಹನ್ ಕುಮಾರಿ, ಸಿಡಿಪಿಓ ಅನಿತಾಕುಮಾರಿ, ಅಜಾಕ್ಸ್ ಕಂಪನಿಯ ಹೆಚ್.ಆರ್.ಗಣಪತಿ, ಸಿ.ಎಸ್.ಆರ್. ಅಧಿಕಾರಿ ಮಂಜುನಾಥ್ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

1 hour ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

3 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

4 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

17 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

21 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago