ತಿರುಪತಿಯಲ್ಲಿರುವ ವಿಶ್ವವಿಖ್ಯಾತ ತಿರುಮಲ ದೇವಸ್ಥಾನದಲ್ಲಿ ತಿರುಪತಿಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು (ಗೋಮಾಂಸ ಟ್ಯಾಲೋ BeefTallow) ಮತ್ತು ಮೀನಿನ ಎಣ್ಣೆ (FishOil) ಅನ್ನು ಬಳಸಲಾಗುತ್ತಿದೆ ಎಂದು ಲ್ಯಾಬ್ ಪರೀಕ್ಷಾ ವರದಿಯ ಸಂಶೋಧನೆಗಳು ದೃಢಪಡಿಸಿವೆ.
ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಈ ಹಿನ್ನೆಲೆ ತಿರುಪತಿಲಡ್ಡು ಅನ್ನು ಲ್ಯಾಬ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ತಿರುಪತಿಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು (ಗೋಮಾಂಸ ಟ್ಯಾಲೋ BeefTallow) ಮತ್ತು ಮೀನಿನ ಎಣ್ಣೆ (FishOil) ಅನ್ನು ಬಳಸಲಾಗುತ್ತಿದೆ ಎಂದು ದೃಢವಾಗಿದೆ.
ಪ್ರಾಣಿಗಳ ಕೊಬ್ಬು ಬಳಸಿ ಲಡ್ಡು ತಯಾರಿಸಿದ್ದಾಗಿ ಟಿಟಿಡಿಯಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಧಿಕೃತ ಸ್ಪಷ್ಟನೆ ನೀಡಲಾಗಿದೆ.
ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು, ಪಾಮಾಯಿಲ್, ಸೋಯಾಬಿನ್, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂದು ಖಚಿತವಾಗಿದೆ.
ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಆರೋಪಿಸಿದ್ದರು. ಆದರೆ, ವೈಎಸ್ಆರ್ಸಿಪಿ ಈ ಆರೋಪವನ್ನು ತಳ್ಳಿ ಹಾಕಿತ್ತು.
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…