ತಿರುಪತಿಯಲ್ಲಿರುವ ವಿಶ್ವವಿಖ್ಯಾತ ತಿರುಮಲ ದೇವಸ್ಥಾನದಲ್ಲಿ ತಿರುಪತಿಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು (ಗೋಮಾಂಸ ಟ್ಯಾಲೋ BeefTallow) ಮತ್ತು ಮೀನಿನ ಎಣ್ಣೆ (FishOil) ಅನ್ನು ಬಳಸಲಾಗುತ್ತಿದೆ ಎಂದು ಲ್ಯಾಬ್ ಪರೀಕ್ಷಾ ವರದಿಯ ಸಂಶೋಧನೆಗಳು ದೃಢಪಡಿಸಿವೆ.
ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಈ ಹಿನ್ನೆಲೆ ತಿರುಪತಿಲಡ್ಡು ಅನ್ನು ಲ್ಯಾಬ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ತಿರುಪತಿಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು (ಗೋಮಾಂಸ ಟ್ಯಾಲೋ BeefTallow) ಮತ್ತು ಮೀನಿನ ಎಣ್ಣೆ (FishOil) ಅನ್ನು ಬಳಸಲಾಗುತ್ತಿದೆ ಎಂದು ದೃಢವಾಗಿದೆ.
ಪ್ರಾಣಿಗಳ ಕೊಬ್ಬು ಬಳಸಿ ಲಡ್ಡು ತಯಾರಿಸಿದ್ದಾಗಿ ಟಿಟಿಡಿಯಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಧಿಕೃತ ಸ್ಪಷ್ಟನೆ ನೀಡಲಾಗಿದೆ.
ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು, ಪಾಮಾಯಿಲ್, ಸೋಯಾಬಿನ್, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂದು ಖಚಿತವಾಗಿದೆ.
ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಆರೋಪಿಸಿದ್ದರು. ಆದರೆ, ವೈಎಸ್ಆರ್ಸಿಪಿ ಈ ಆರೋಪವನ್ನು ತಳ್ಳಿ ಹಾಕಿತ್ತು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…