ತಿರುಪತಿ ಲಡ್ಡು ತಯಾರಿಕೆಯಲ್ಲಿ‌ ಪ್ರಾಣಿಗಳ ಕೊಬ್ಬು (ಗೋಮಾಂಸ ಟ್ಯಾಲೋ) ಮತ್ತು ಮೀನಿನ ಎಣ್ಣೆ (FishOil) ಬಳಕೆ ದೃಢ

ತಿರುಪತಿಯಲ್ಲಿರುವ ವಿಶ್ವವಿಖ್ಯಾತ ತಿರುಮಲ ದೇವಸ್ಥಾನದಲ್ಲಿ ತಿರುಪತಿಲಡ್ಡು ತಯಾರಿಕೆಯಲ್ಲಿ‌ ಪ್ರಾಣಿಗಳ ಕೊಬ್ಬು (ಗೋಮಾಂಸ ಟ್ಯಾಲೋ BeefTallow) ಮತ್ತು ಮೀನಿನ ಎಣ್ಣೆ (FishOil) ಅನ್ನು ಬಳಸಲಾಗುತ್ತಿದೆ ಎಂದು ಲ್ಯಾಬ್ ಪರೀಕ್ಷಾ ವರದಿಯ ಸಂಶೋಧನೆಗಳು ದೃಢಪಡಿಸಿವೆ.

ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಈ ಹಿನ್ನೆಲೆ ತಿರುಪತಿಲಡ್ಡು ಅನ್ನು ಲ್ಯಾಬ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ತಿರುಪತಿಲಡ್ಡು ತಯಾರಿಕೆಯಲ್ಲಿ‌ ಪ್ರಾಣಿಗಳ ಕೊಬ್ಬು (ಗೋಮಾಂಸ ಟ್ಯಾಲೋ BeefTallow) ಮತ್ತು ಮೀನಿನ ಎಣ್ಣೆ (FishOil) ಅನ್ನು ಬಳಸಲಾಗುತ್ತಿದೆ ಎಂದು ದೃಢವಾಗಿದೆ.

ಪ್ರಾಣಿಗಳ ಕೊಬ್ಬು ಬಳಸಿ ಲಡ್ಡು ತಯಾರಿಸಿದ್ದಾಗಿ ಟಿಟಿಡಿಯಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಧಿಕೃತ ಸ್ಪಷ್ಟನೆ ನೀಡಲಾಗಿದೆ.

ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು, ಪಾಮಾಯಿಲ್‌, ಸೋಯಾಬಿನ್‌, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂದು ಖಚಿತವಾಗಿದೆ.

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಆರೋಪಿಸಿದ್ದರು. ಆದರೆ, ವೈಎಸ್‌ಆರ್‌ಸಿಪಿ ಈ ಆರೋಪವನ್ನು ತಳ್ಳಿ ಹಾಕಿತ್ತು.

Ramesh Babu

Journalist

Recent Posts

ಬಗರ್ ಹುಕ್ಕುಂ ಸಮಿತಿ ಸಭೆ ವಿಳಂಬ: ಹಕ್ಕುಪತ್ರಕ್ಕಾಗಿ ರೈತರ ಅಲೆದಾಟ: ಅರ್ಜಿ ಸಲ್ಲಿಸಿ ವರ್ಷಗಳಾದರೂ ಸಾಗುವಳಿ ಚೀಟಿ ಇಲ್ಲ: ಆತಂಕದಲ್ಲಿ ರೈತ

ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…

6 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

21 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 day ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

1 day ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

2 days ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

2 days ago