ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ ತಿರುಮಗೊಂಡನಹಳ್ಳಿ ಬಳಿ ರೈಲ್ವೆ ಗೇಟ್ ಇದ್ದು, ಮೇಲ್ಸೇತುವೆ ನಿರ್ಮಿಸಲು ಜನರು ಒತ್ತಾಯಿಸಿದ್ದರು. ಈ ಹಿನ್ನೆಲೆ ತಿರುಮಗೊಂಡನಹಳ್ಳಿ ರೈಲ್ವೆ ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಅವರ ನೇತೃತ್ವದಲ್ಲಿ ಸರ್ಕಾರದಿಂದ ಅನುಮೋದನೆಗೊಂಡಿದೆ. ಅತೀ ಶೀಘ್ರದಲ್ಲಿ ಮೇಲ್ಸೇತುವೆ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್ ಹೇಳಿದರು.

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಭಕ್ತಾಧಿಗಳು ಬಂದು ಹೋಗುತ್ತಿರುತ್ತಾರೆ. ರೈಲ್ವೆ ಗೇಟ್ ಹಾಕಿದರೆ ಭಕ್ತಾಧಿಗಳು ಹಾಗೂ ಸುಮಾರು 25ಹಳ್ಳಿಗಳ ಜನರಿಗೆ ತೀವ್ರ ತೊಂದರೆ ಉಂಟಾಗುತ್ತಿತ್ತು. ವಾಹನ ದಟ್ಟಣೆ ಹೆಚ್ಚಾಗುತ್ತಿತ್ತು. ಜನರ ಉಪಯೋಗಕ್ಕಾಗಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮೇಲ್ಸೇತುವೆ ನಿರ್ಮಿಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

“ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ”

ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ ರಾಜಕಾರಣದಲ್ಲಿ ಯಾರಿಗೂ ನೋವುಂಟು ಮಾಡದೇ, ಯಾರನ್ನೂ ಕಡೆಗಣಿಸದೇ ರಾಜಕೀಯ ಮಾಡಿಕೊಂಡು ಬಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡುವುದಿಲ್ಲ. ಕಡೆಗಣನೆ ಮಾಡಿರುವ ಇತಿಹಾಸವಿಲ್ಲ ಎಂದು ದೊಡ್ಡಬಳ್ಳಾಪುರ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರು ಸ್ಥಳೀಯ ಕಾಂಗ್ರೆಸ್ ಪಕ್ಷದ ಚುನಾಯಿತ ಸದಸ್ಯರನ್ನು ಆಹ್ವಾನಿಸದೇ ಕಡೆಗಣಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ.‌ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಹಿರಿಯ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುತ್ತಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಒಂದು ವೇಳೆ ಭಿನ್ನಾಭಿಪ್ರಾಯವಿದ್ದರೆ ಪಕ್ಷದ ಚೌಕಟ್ಟಿನಲ್ಲಿ ಕುಳಿತು ಮಾತಾಡಿ ಬಗೆಹರಿಸಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲಾಗುವುದು ಎಂದು ತಿಳಿಸಿದರು.

ನಾವು ಯುವಕರು. ಕಾಂಗ್ರೆಸ್ ಸಿದ್ಧಾಂತ ಹಾಗೂ ಹಿರಿಯರಾದ ಕೆ.ಎಚ್ ಮುನಿಯಪ್ಪನವರ ಕೈ ಬಲಪಡಿಸಲು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇವೆ. ಸಚಿವರು ಎಲ್ಲರನ್ನು ಒಗ್ಗೂಡಿಸಿಕೊಂಡು ರಾಜಕಾರಣ ಮಾಡುತ್ತಾರೆ. ಸಚಿವರಲ್ಲಿ ಮೇಲು ಕೀಳು ಎಂಬ ಮನೋಭಾವನೆ ಇಲ್ಲ. ಯಾರನ್ನೂ ಕಡೆಗಣಿಸುವುದಿಲ್ಲ. ಒಂದು ವೇಳೆ ಸಚಿವರ ಗಮನಕ್ಕೆ ಬಾರದೇ ಯಾವುದಾದರು ಎಡವಟ್ಟು ಆಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲಾಗುವುದು ಎಂದು ಹೇಳಿದರು.

ಶಿಷ್ಟಚಾರ ಪ್ರಕಾರ ನಗರಸಭಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಗರಸಭಾ ಸದಸ್ಯರು ಭಾಗವಹಿಸಿದ್ದರು. ಆದರೆ ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಿಲ್ಲ ಎಂಬ ಆರೋಪಗಳು ಸತ್ಯಕ್ಕೆ ದೂರವಾದದ್ದು. ಇದಕ್ಕೆ ಕಾರಣ ಕೆ.ಎಚ್ ಮುನಿಯಪ್ಪನವರು ಅಲ್ಲ. ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಈ ಆರೋಪಗಳು ಕೇಳಿಬಂದಿದೆ. ಸಚಿವರು ಯಾರನ್ನೂ ಕಡೆಗಣಿಸಿಲ್ಲ. ಕಡೆಗಣಿಸುವುದಿಲ್ಲ ಎಂದರು…..

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

8 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

11 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

16 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

17 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

17 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

19 hours ago