ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ ತಿರುಮಗೊಂಡನಹಳ್ಳಿ ಬಳಿ ರೈಲ್ವೆ ಗೇಟ್ ಇದ್ದು, ಮೇಲ್ಸೇತುವೆ ನಿರ್ಮಿಸಲು ಜನರು ಒತ್ತಾಯಿಸಿದ್ದರು. ಈ ಹಿನ್ನೆಲೆ ತಿರುಮಗೊಂಡನಹಳ್ಳಿ ರೈಲ್ವೆ ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಅವರ ನೇತೃತ್ವದಲ್ಲಿ ಸರ್ಕಾರದಿಂದ ಅನುಮೋದನೆಗೊಂಡಿದೆ. ಅತೀ ಶೀಘ್ರದಲ್ಲಿ ಮೇಲ್ಸೇತುವೆ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್ ಹೇಳಿದರು.

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಭಕ್ತಾಧಿಗಳು ಬಂದು ಹೋಗುತ್ತಿರುತ್ತಾರೆ. ರೈಲ್ವೆ ಗೇಟ್ ಹಾಕಿದರೆ ಭಕ್ತಾಧಿಗಳು ಹಾಗೂ ಸುಮಾರು 25ಹಳ್ಳಿಗಳ ಜನರಿಗೆ ತೀವ್ರ ತೊಂದರೆ ಉಂಟಾಗುತ್ತಿತ್ತು. ವಾಹನ ದಟ್ಟಣೆ ಹೆಚ್ಚಾಗುತ್ತಿತ್ತು. ಜನರ ಉಪಯೋಗಕ್ಕಾಗಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮೇಲ್ಸೇತುವೆ ನಿರ್ಮಿಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

“ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ”

ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ ರಾಜಕಾರಣದಲ್ಲಿ ಯಾರಿಗೂ ನೋವುಂಟು ಮಾಡದೇ, ಯಾರನ್ನೂ ಕಡೆಗಣಿಸದೇ ರಾಜಕೀಯ ಮಾಡಿಕೊಂಡು ಬಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡುವುದಿಲ್ಲ. ಕಡೆಗಣನೆ ಮಾಡಿರುವ ಇತಿಹಾಸವಿಲ್ಲ ಎಂದು ದೊಡ್ಡಬಳ್ಳಾಪುರ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರು ಸ್ಥಳೀಯ ಕಾಂಗ್ರೆಸ್ ಪಕ್ಷದ ಚುನಾಯಿತ ಸದಸ್ಯರನ್ನು ಆಹ್ವಾನಿಸದೇ ಕಡೆಗಣಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ.‌ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಹಿರಿಯ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುತ್ತಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಒಂದು ವೇಳೆ ಭಿನ್ನಾಭಿಪ್ರಾಯವಿದ್ದರೆ ಪಕ್ಷದ ಚೌಕಟ್ಟಿನಲ್ಲಿ ಕುಳಿತು ಮಾತಾಡಿ ಬಗೆಹರಿಸಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲಾಗುವುದು ಎಂದು ತಿಳಿಸಿದರು.

ನಾವು ಯುವಕರು. ಕಾಂಗ್ರೆಸ್ ಸಿದ್ಧಾಂತ ಹಾಗೂ ಹಿರಿಯರಾದ ಕೆ.ಎಚ್ ಮುನಿಯಪ್ಪನವರ ಕೈ ಬಲಪಡಿಸಲು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇವೆ. ಸಚಿವರು ಎಲ್ಲರನ್ನು ಒಗ್ಗೂಡಿಸಿಕೊಂಡು ರಾಜಕಾರಣ ಮಾಡುತ್ತಾರೆ. ಸಚಿವರಲ್ಲಿ ಮೇಲು ಕೀಳು ಎಂಬ ಮನೋಭಾವನೆ ಇಲ್ಲ. ಯಾರನ್ನೂ ಕಡೆಗಣಿಸುವುದಿಲ್ಲ. ಒಂದು ವೇಳೆ ಸಚಿವರ ಗಮನಕ್ಕೆ ಬಾರದೇ ಯಾವುದಾದರು ಎಡವಟ್ಟು ಆಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲಾಗುವುದು ಎಂದು ಹೇಳಿದರು.

ಶಿಷ್ಟಚಾರ ಪ್ರಕಾರ ನಗರಸಭಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಗರಸಭಾ ಸದಸ್ಯರು ಭಾಗವಹಿಸಿದ್ದರು. ಆದರೆ ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಿಲ್ಲ ಎಂಬ ಆರೋಪಗಳು ಸತ್ಯಕ್ಕೆ ದೂರವಾದದ್ದು. ಇದಕ್ಕೆ ಕಾರಣ ಕೆ.ಎಚ್ ಮುನಿಯಪ್ಪನವರು ಅಲ್ಲ. ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಈ ಆರೋಪಗಳು ಕೇಳಿಬಂದಿದೆ. ಸಚಿವರು ಯಾರನ್ನೂ ಕಡೆಗಣಿಸಿಲ್ಲ. ಕಡೆಗಣಿಸುವುದಿಲ್ಲ ಎಂದರು…..

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

15 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago