ತಿರುಮಗೊಂಡಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಘಾಟಿ ಪ್ರಾಧಿಕಾರದ ಸದಸ್ಯರ ಮನವಿ

ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ‌‌ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು, ಇಲ್ಲಿ ರೈಲ್ವೆ ಗೇಟ್ ಇದ್ದು, ಇದರಿಂದ ಕ್ಷೇತ್ರಕ್ಕೆ ಬರುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ, ಪ್ರಯಾಣಿಕರ ಅನುಕೂಲಕ್ಕಾಗಿ ತಿರುಮಗೊಂಡಹಳ್ಳಿ ರೈಲ್ವೆ ಗೇಟ್ ನಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣರವರಿಗೆ ಘಾಟಿ ಪ್ರಾಧಿಕಾರದ ಸದಸ್ಯರು ಮನವಿ ಮಾಡಿದರು.

ಘಾಟಿ ಕ್ಷೇತ್ರದ ಬಳಿಯ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಸನ್ಮಾನ್ ಕಾರ್ಯಕ್ರಮವನ್ನು ಅಯೋಜನೆ ಮಾಡಲಾಗಿತ್ತು, ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ವಿ.ಸೋಮಣ್ಣ ಭಾಗವಹಿಸಿದ್ದರು, ಈ ವೇಳೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ತಿರುಮನಗೊಂಡನಹಳ್ಳಿ ರೈಲ್ವೆ ಗೇಟ್ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಮನವಿ ಮಾಡಿದರು.

ಕರ್ನಾಟಕ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಸಹ ಒಂದಾಗಿದೆ, ನಾಗಾರಾಧನೆ ಕ್ಷೇತ್ರವಾಗಿರುವುದರಿಂದ ಪ್ರತಿದಿನ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಭೇಟಿ ನೀಡುವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಾಡಲಾಗಿದೆ. ಭಕ್ತರ ಅನುಕೂಲಕ್ಕಾಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಬೇಕೆಂಬುದು ಬಹುದಿನಗಳ ಬೇಡಿಕೆಯಾಗಿದೆ.

ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಘಾಟಿ ಪ್ರಾಧಿಕಾರದ ಸದಸ್ಯರಾದ ಆರ್.ವಿ.ಮಹೇಶ್ ಕುಮಾರ್, ಘಾಟಿ ಕ್ಷೇತ್ರಕ್ಕೆ ಪ್ರತಿದಿನ 2 ರಿಂದ 3 ಸಾವಿರ ಮತ್ತು ರಜಾ ದಿನಗಳಲ್ಲಿ 10 ರಿಂದ 15 ಸಾವಿರ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವರು, ಭಕ್ತರು ಕ್ಷೇತ್ರಕ್ಕೆ ಬರುವ ಮಾರ್ಗದಲ್ಲಿ ತಿರುಮಗೊಂಡನಹಳ್ಳಿಯಲ್ಲಿ ರೈಲ್ವೆ ಗೇಟ್ ಇದೆ, ಈ ರೈಲು ಮಾರ್ಗದಲ್ಲಿ 30 ನಿಮಿಷಕ್ಕೊಮ್ಮೆ ರೈಲುಗಳು ಸಂಚಾರಿಸುತ್ತವೆ, ರೈಲ್ವೆ ಗೇಟ್ ಹಾಕುವುದರಿಂದ ಭಕ್ತರು ಕಾಯುವ ಬೇಕಾದ ಪರಿಸ್ಥಿತಿ ಇದೆ, ರೈಲ್ವೆ ಮೇಲ್ಸೇತುವೆ ನಿರ್ಮಾಣದಿಂದ ಭಕ್ತರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅನುಕೂಲವಾಗುತ್ತೆ ಎಂದರು.

ಈ ವೇಳೆ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರವಿ ಸಿದ್ಧಪ್ಪ ಸೇರಿದಂತೆ ಮುಖಂಡರು ಇದ್ದರು.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

4 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

7 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

9 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

10 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

16 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

17 hours ago