ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು, ಇಲ್ಲಿ ರೈಲ್ವೆ ಗೇಟ್ ಇದ್ದು, ಇದರಿಂದ ಕ್ಷೇತ್ರಕ್ಕೆ ಬರುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ, ಪ್ರಯಾಣಿಕರ ಅನುಕೂಲಕ್ಕಾಗಿ ತಿರುಮಗೊಂಡಹಳ್ಳಿ ರೈಲ್ವೆ ಗೇಟ್ ನಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣರವರಿಗೆ ಘಾಟಿ ಪ್ರಾಧಿಕಾರದ ಸದಸ್ಯರು ಮನವಿ ಮಾಡಿದರು.
ಘಾಟಿ ಕ್ಷೇತ್ರದ ಬಳಿಯ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಸನ್ಮಾನ್ ಕಾರ್ಯಕ್ರಮವನ್ನು ಅಯೋಜನೆ ಮಾಡಲಾಗಿತ್ತು, ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ವಿ.ಸೋಮಣ್ಣ ಭಾಗವಹಿಸಿದ್ದರು, ಈ ವೇಳೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ತಿರುಮನಗೊಂಡನಹಳ್ಳಿ ರೈಲ್ವೆ ಗೇಟ್ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಮನವಿ ಮಾಡಿದರು.
ಕರ್ನಾಟಕ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಸಹ ಒಂದಾಗಿದೆ, ನಾಗಾರಾಧನೆ ಕ್ಷೇತ್ರವಾಗಿರುವುದರಿಂದ ಪ್ರತಿದಿನ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಭೇಟಿ ನೀಡುವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಾಡಲಾಗಿದೆ. ಭಕ್ತರ ಅನುಕೂಲಕ್ಕಾಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಬೇಕೆಂಬುದು ಬಹುದಿನಗಳ ಬೇಡಿಕೆಯಾಗಿದೆ.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಘಾಟಿ ಪ್ರಾಧಿಕಾರದ ಸದಸ್ಯರಾದ ಆರ್.ವಿ.ಮಹೇಶ್ ಕುಮಾರ್, ಘಾಟಿ ಕ್ಷೇತ್ರಕ್ಕೆ ಪ್ರತಿದಿನ 2 ರಿಂದ 3 ಸಾವಿರ ಮತ್ತು ರಜಾ ದಿನಗಳಲ್ಲಿ 10 ರಿಂದ 15 ಸಾವಿರ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವರು, ಭಕ್ತರು ಕ್ಷೇತ್ರಕ್ಕೆ ಬರುವ ಮಾರ್ಗದಲ್ಲಿ ತಿರುಮಗೊಂಡನಹಳ್ಳಿಯಲ್ಲಿ ರೈಲ್ವೆ ಗೇಟ್ ಇದೆ, ಈ ರೈಲು ಮಾರ್ಗದಲ್ಲಿ 30 ನಿಮಿಷಕ್ಕೊಮ್ಮೆ ರೈಲುಗಳು ಸಂಚಾರಿಸುತ್ತವೆ, ರೈಲ್ವೆ ಗೇಟ್ ಹಾಕುವುದರಿಂದ ಭಕ್ತರು ಕಾಯುವ ಬೇಕಾದ ಪರಿಸ್ಥಿತಿ ಇದೆ, ರೈಲ್ವೆ ಮೇಲ್ಸೇತುವೆ ನಿರ್ಮಾಣದಿಂದ ಭಕ್ತರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅನುಕೂಲವಾಗುತ್ತೆ ಎಂದರು.
ಈ ವೇಳೆ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರವಿ ಸಿದ್ಧಪ್ಪ ಸೇರಿದಂತೆ ಮುಖಂಡರು ಇದ್ದರು.
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…