ಕೋಲಾರ: ಆಂಧ್ರಪ್ರದೇಶದ ತಿರುಮಲ ತಿರುಪತಿ ಬೆಟ್ಟದ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಪ್ರತಿ ನಿತ್ಯ ನಡೆಯುವ ಅನ್ನದಾಸೋಹಕ್ಕೆ ಮಂಗಳವಾರ ನಗರದಿಂದ ಒಂದು ಲಾರಿ ಲೋಡ್ ತರಕಾರಿಗಳನ್ನು ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಖರೀದಿಸಿ ಕಳಸಿಕೊಟ್ಟರು.
ಕೋಲಾರ ಜಿಲ್ಲೆ ಸೇರಿದಂತೆ ಇತರೆ ಭಾಗಗಳಿಂದ ತರಕಾರಿಗಳನ್ನು ಅನ್ನದಾಸೋಹಕ್ಕೆ ತರಲು ಉಪಯೋಗವಾಗಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ಅವರು, ಸುಮಾರು 40 ಲಕ್ಷ ವೆಚ್ಚದಲ್ಲಿ ಸ್ವಂತ ಹಣದಿಂದ ವಾಹನವನ್ನು ಖರೀದಿಸಿ ತಿರುಮಲ ಆಡಳಿತ ಮಂಡಳಿಗೆ ದಾನಿಗಳಿಂದ ಕೊಡುವ ತರಕಾರಿ ಅವಶ್ಯಕತೆಗೆ ತಕ್ಕಷ್ಟು ಸಿಗದೆ ಇದ್ದಾಗ ಶಾಸಕರೇ ನೇರವಾಗಿ ವ್ಯಾಪಾರಸ್ಥರು ಹಾಗೂ ರೈತರಿಂದ ಖರೀದಿಸಿ ಕಳಸಿಕೊಡುವ ವ್ಯವಸ್ಥೆಯನ್ನು ಸುಮಾರು 15 ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ.
ಈ ಸಂದರ್ಭದಲ್ಲಿ ಕೊತ್ತೂರು ಮಂಜುನಾಥ್ ಅವರ ಅಭಿಮಾನಿ ಬಳಗದವರಾದ ಚಂಜಿಮಲೆ ರಮೇಶ್, ಮಲೇಷಿಯಾ ರಾಜಕುಮಾರ್, ಸೀಸಂದ್ರ ಗೋಪಾಲಗೌಡ, ವೈ ಶಿವಕುಮಾರ್, ಮೈಲಾಂಡಹಳ್ಳಿ ಮುರಳಿ, ಮಹೇಶ್, ಲೋಕೇಶ್, ಖಾದ್ರಿಪುರ ಬಾಬು, ಬಿ.ಟಿ ಚಂದ್ರಶೇಖರ್, ಯಲವಾರ ನವೀನ್ ಕುಮಾರ್ ಮುಂತಾದವರು ಇದ್ದರು.
ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…