ಕೋಲಾರ: ಆಂಧ್ರಪ್ರದೇಶದ ತಿರುಮಲ ತಿರುಪತಿ ಬೆಟ್ಟದ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಪ್ರತಿ ನಿತ್ಯ ನಡೆಯುವ ಅನ್ನದಾಸೋಹಕ್ಕೆ ಮಂಗಳವಾರ ನಗರದಿಂದ ಒಂದು ಲಾರಿ ಲೋಡ್ ತರಕಾರಿಗಳನ್ನು ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಖರೀದಿಸಿ ಕಳಸಿಕೊಟ್ಟರು.
ಕೋಲಾರ ಜಿಲ್ಲೆ ಸೇರಿದಂತೆ ಇತರೆ ಭಾಗಗಳಿಂದ ತರಕಾರಿಗಳನ್ನು ಅನ್ನದಾಸೋಹಕ್ಕೆ ತರಲು ಉಪಯೋಗವಾಗಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ಅವರು, ಸುಮಾರು 40 ಲಕ್ಷ ವೆಚ್ಚದಲ್ಲಿ ಸ್ವಂತ ಹಣದಿಂದ ವಾಹನವನ್ನು ಖರೀದಿಸಿ ತಿರುಮಲ ಆಡಳಿತ ಮಂಡಳಿಗೆ ದಾನಿಗಳಿಂದ ಕೊಡುವ ತರಕಾರಿ ಅವಶ್ಯಕತೆಗೆ ತಕ್ಕಷ್ಟು ಸಿಗದೆ ಇದ್ದಾಗ ಶಾಸಕರೇ ನೇರವಾಗಿ ವ್ಯಾಪಾರಸ್ಥರು ಹಾಗೂ ರೈತರಿಂದ ಖರೀದಿಸಿ ಕಳಸಿಕೊಡುವ ವ್ಯವಸ್ಥೆಯನ್ನು ಸುಮಾರು 15 ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ.
ಈ ಸಂದರ್ಭದಲ್ಲಿ ಕೊತ್ತೂರು ಮಂಜುನಾಥ್ ಅವರ ಅಭಿಮಾನಿ ಬಳಗದವರಾದ ಚಂಜಿಮಲೆ ರಮೇಶ್, ಮಲೇಷಿಯಾ ರಾಜಕುಮಾರ್, ಸೀಸಂದ್ರ ಗೋಪಾಲಗೌಡ, ವೈ ಶಿವಕುಮಾರ್, ಮೈಲಾಂಡಹಳ್ಳಿ ಮುರಳಿ, ಮಹೇಶ್, ಲೋಕೇಶ್, ಖಾದ್ರಿಪುರ ಬಾಬು, ಬಿ.ಟಿ ಚಂದ್ರಶೇಖರ್, ಯಲವಾರ ನವೀನ್ ಕುಮಾರ್ ಮುಂತಾದವರು ಇದ್ದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…