ಕೋಲಾರ: ಆಂಧ್ರಪ್ರದೇಶದ ತಿರುಮಲ ತಿರುಪತಿ ಬೆಟ್ಟದ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಪ್ರತಿ ನಿತ್ಯ ನಡೆಯುವ ಅನ್ನದಾಸೋಹಕ್ಕೆ ಮಂಗಳವಾರ ನಗರದಿಂದ ಒಂದು ಲಾರಿ ಲೋಡ್ ತರಕಾರಿಗಳನ್ನು ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಖರೀದಿಸಿ ಕಳಸಿಕೊಟ್ಟರು.
ಕೋಲಾರ ಜಿಲ್ಲೆ ಸೇರಿದಂತೆ ಇತರೆ ಭಾಗಗಳಿಂದ ತರಕಾರಿಗಳನ್ನು ಅನ್ನದಾಸೋಹಕ್ಕೆ ತರಲು ಉಪಯೋಗವಾಗಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ಅವರು, ಸುಮಾರು 40 ಲಕ್ಷ ವೆಚ್ಚದಲ್ಲಿ ಸ್ವಂತ ಹಣದಿಂದ ವಾಹನವನ್ನು ಖರೀದಿಸಿ ತಿರುಮಲ ಆಡಳಿತ ಮಂಡಳಿಗೆ ದಾನಿಗಳಿಂದ ಕೊಡುವ ತರಕಾರಿ ಅವಶ್ಯಕತೆಗೆ ತಕ್ಕಷ್ಟು ಸಿಗದೆ ಇದ್ದಾಗ ಶಾಸಕರೇ ನೇರವಾಗಿ ವ್ಯಾಪಾರಸ್ಥರು ಹಾಗೂ ರೈತರಿಂದ ಖರೀದಿಸಿ ಕಳಸಿಕೊಡುವ ವ್ಯವಸ್ಥೆಯನ್ನು ಸುಮಾರು 15 ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ.
ಈ ಸಂದರ್ಭದಲ್ಲಿ ಕೊತ್ತೂರು ಮಂಜುನಾಥ್ ಅವರ ಅಭಿಮಾನಿ ಬಳಗದವರಾದ ಚಂಜಿಮಲೆ ರಮೇಶ್, ಮಲೇಷಿಯಾ ರಾಜಕುಮಾರ್, ಸೀಸಂದ್ರ ಗೋಪಾಲಗೌಡ, ವೈ ಶಿವಕುಮಾರ್, ಮೈಲಾಂಡಹಳ್ಳಿ ಮುರಳಿ, ಮಹೇಶ್, ಲೋಕೇಶ್, ಖಾದ್ರಿಪುರ ಬಾಬು, ಬಿ.ಟಿ ಚಂದ್ರಶೇಖರ್, ಯಲವಾರ ನವೀನ್ ಕುಮಾರ್ ಮುಂತಾದವರು ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…