ಕೋಲಾರ: ಆಂಧ್ರಪ್ರದೇಶದ ತಿರುಮಲ ತಿರುಪತಿ ಬೆಟ್ಟದ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಪ್ರತಿ ನಿತ್ಯ ನಡೆಯುವ ಅನ್ನದಾಸೋಹಕ್ಕೆ ಮಂಗಳವಾರ ನಗರದಿಂದ ಒಂದು ಲಾರಿ ಲೋಡ್ ತರಕಾರಿಗಳನ್ನು ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಖರೀದಿಸಿ ಕಳಸಿಕೊಟ್ಟರು.
ಕೋಲಾರ ಜಿಲ್ಲೆ ಸೇರಿದಂತೆ ಇತರೆ ಭಾಗಗಳಿಂದ ತರಕಾರಿಗಳನ್ನು ಅನ್ನದಾಸೋಹಕ್ಕೆ ತರಲು ಉಪಯೋಗವಾಗಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ಅವರು, ಸುಮಾರು 40 ಲಕ್ಷ ವೆಚ್ಚದಲ್ಲಿ ಸ್ವಂತ ಹಣದಿಂದ ವಾಹನವನ್ನು ಖರೀದಿಸಿ ತಿರುಮಲ ಆಡಳಿತ ಮಂಡಳಿಗೆ ದಾನಿಗಳಿಂದ ಕೊಡುವ ತರಕಾರಿ ಅವಶ್ಯಕತೆಗೆ ತಕ್ಕಷ್ಟು ಸಿಗದೆ ಇದ್ದಾಗ ಶಾಸಕರೇ ನೇರವಾಗಿ ವ್ಯಾಪಾರಸ್ಥರು ಹಾಗೂ ರೈತರಿಂದ ಖರೀದಿಸಿ ಕಳಸಿಕೊಡುವ ವ್ಯವಸ್ಥೆಯನ್ನು ಸುಮಾರು 15 ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ.
ಈ ಸಂದರ್ಭದಲ್ಲಿ ಕೊತ್ತೂರು ಮಂಜುನಾಥ್ ಅವರ ಅಭಿಮಾನಿ ಬಳಗದವರಾದ ಚಂಜಿಮಲೆ ರಮೇಶ್, ಮಲೇಷಿಯಾ ರಾಜಕುಮಾರ್, ಸೀಸಂದ್ರ ಗೋಪಾಲಗೌಡ, ವೈ ಶಿವಕುಮಾರ್, ಮೈಲಾಂಡಹಳ್ಳಿ ಮುರಳಿ, ಮಹೇಶ್, ಲೋಕೇಶ್, ಖಾದ್ರಿಪುರ ಬಾಬು, ಬಿ.ಟಿ ಚಂದ್ರಶೇಖರ್, ಯಲವಾರ ನವೀನ್ ಕುಮಾರ್ ಮುಂತಾದವರು ಇದ್ದರು.
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…