Categories: ಕೋಲಾರ

ತಿರುಮಲ ಅನ್ನದಾಸೋಹಕ್ಕೆ ತರಕಾರಿ ವಿತರಿಸಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಆಂಧ್ರಪ್ರದೇಶದ ತಿರುಮಲ ತಿರುಪತಿ ಬೆಟ್ಟದ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಪ್ರತಿ ನಿತ್ಯ ನಡೆಯುವ ಅನ್ನದಾಸೋಹಕ್ಕೆ ಮಂಗಳವಾರ ನಗರದಿಂದ ಒಂದು ಲಾರಿ ಲೋಡ್ ತರಕಾರಿಗಳನ್ನು ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಖರೀದಿಸಿ ಕಳಸಿಕೊಟ್ಟರು.

ಕೋಲಾರ ಜಿಲ್ಲೆ ಸೇರಿದಂತೆ ಇತರೆ ಭಾಗಗಳಿಂದ ತರಕಾರಿಗಳನ್ನು ಅನ್ನದಾಸೋಹಕ್ಕೆ ತರಲು ಉಪಯೋಗವಾಗಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ಅವರು, ಸುಮಾರು 40 ಲಕ್ಷ ವೆಚ್ಚದಲ್ಲಿ ಸ್ವಂತ ಹಣದಿಂದ ವಾಹನವನ್ನು ಖರೀದಿಸಿ ತಿರುಮಲ ಆಡಳಿತ ಮಂಡಳಿಗೆ ದಾನಿಗಳಿಂದ ಕೊಡುವ ತರಕಾರಿ ಅವಶ್ಯಕತೆಗೆ ತಕ್ಕಷ್ಟು ಸಿಗದೆ ಇದ್ದಾಗ ಶಾಸಕರೇ ನೇರವಾಗಿ ವ್ಯಾಪಾರಸ್ಥರು ಹಾಗೂ ರೈತರಿಂದ ಖರೀದಿಸಿ ಕಳಸಿಕೊಡುವ ವ್ಯವಸ್ಥೆಯನ್ನು ಸುಮಾರು 15 ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ.

ಈ ಸಂದರ್ಭದಲ್ಲಿ ಕೊತ್ತೂರು ಮಂಜುನಾಥ್ ಅವರ ಅಭಿಮಾನಿ ಬಳಗದವರಾದ ಚಂಜಿಮಲೆ ರಮೇಶ್, ಮಲೇಷಿಯಾ ರಾಜಕುಮಾರ್, ಸೀಸಂದ್ರ ಗೋಪಾಲಗೌಡ, ವೈ ಶಿವಕುಮಾರ್, ಮೈಲಾಂಡಹಳ್ಳಿ ಮುರಳಿ, ಮಹೇಶ್, ಲೋಕೇಶ್, ಖಾದ್ರಿಪುರ ಬಾಬು, ಬಿ.ಟಿ ಚಂದ್ರಶೇಖರ್, ಯಲವಾರ ನವೀನ್ ಕುಮಾರ್ ಮುಂತಾದವರು ಇದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

14 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

24 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

24 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

2 days ago