Categories: ಕೋಲಾರ

ತಿರುಮಲ ಅನ್ನದಾಸೋಹಕ್ಕೆ ತರಕಾರಿ ವಿತರಿಸಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಆಂಧ್ರಪ್ರದೇಶದ ತಿರುಮಲ ತಿರುಪತಿ ಬೆಟ್ಟದ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಪ್ರತಿ ನಿತ್ಯ ನಡೆಯುವ ಅನ್ನದಾಸೋಹಕ್ಕೆ ಮಂಗಳವಾರ ನಗರದಿಂದ ಒಂದು ಲಾರಿ ಲೋಡ್ ತರಕಾರಿಗಳನ್ನು ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಖರೀದಿಸಿ ಕಳಸಿಕೊಟ್ಟರು.

ಕೋಲಾರ ಜಿಲ್ಲೆ ಸೇರಿದಂತೆ ಇತರೆ ಭಾಗಗಳಿಂದ ತರಕಾರಿಗಳನ್ನು ಅನ್ನದಾಸೋಹಕ್ಕೆ ತರಲು ಉಪಯೋಗವಾಗಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ಅವರು, ಸುಮಾರು 40 ಲಕ್ಷ ವೆಚ್ಚದಲ್ಲಿ ಸ್ವಂತ ಹಣದಿಂದ ವಾಹನವನ್ನು ಖರೀದಿಸಿ ತಿರುಮಲ ಆಡಳಿತ ಮಂಡಳಿಗೆ ದಾನಿಗಳಿಂದ ಕೊಡುವ ತರಕಾರಿ ಅವಶ್ಯಕತೆಗೆ ತಕ್ಕಷ್ಟು ಸಿಗದೆ ಇದ್ದಾಗ ಶಾಸಕರೇ ನೇರವಾಗಿ ವ್ಯಾಪಾರಸ್ಥರು ಹಾಗೂ ರೈತರಿಂದ ಖರೀದಿಸಿ ಕಳಸಿಕೊಡುವ ವ್ಯವಸ್ಥೆಯನ್ನು ಸುಮಾರು 15 ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ.

ಈ ಸಂದರ್ಭದಲ್ಲಿ ಕೊತ್ತೂರು ಮಂಜುನಾಥ್ ಅವರ ಅಭಿಮಾನಿ ಬಳಗದವರಾದ ಚಂಜಿಮಲೆ ರಮೇಶ್, ಮಲೇಷಿಯಾ ರಾಜಕುಮಾರ್, ಸೀಸಂದ್ರ ಗೋಪಾಲಗೌಡ, ವೈ ಶಿವಕುಮಾರ್, ಮೈಲಾಂಡಹಳ್ಳಿ ಮುರಳಿ, ಮಹೇಶ್, ಲೋಕೇಶ್, ಖಾದ್ರಿಪುರ ಬಾಬು, ಬಿ.ಟಿ ಚಂದ್ರಶೇಖರ್, ಯಲವಾರ ನವೀನ್ ಕುಮಾರ್ ಮುಂತಾದವರು ಇದ್ದರು.

Ramesh Babu

Journalist

Recent Posts

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

5 seconds ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago