Categories: ಲೇಖನ

ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು

ಮುದ್ದು ಬಾಲ್ಯ……..

ದೊಡ್ಡವರ ದಡ್ಡತನ – ಬುದ್ದಿ ಇರುವವರ ಕಳ್ಳತನ – ಓದಿದವರ ಭ್ರಷ್ಟತನ – ಅಧಿಕಾರಕ್ಕೇರಿದವರ ಅಸಭ್ಯತನ – ನಮ್ಮ ಮೂರ್ಖತನಗಳಿಗೆ ಮಕ್ಕಳು ಪಾಠವಾಗಬಹುದೇ……

ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು,

ಅರಿಯಬೇಕಿದೆ ಚಿಂಟುಗಳಿಂದ ಆ ಮುಗ್ಧ ಮನಸ್ಸಿನ ಗುಟ್ಟನ್ನು,

ಕಲಿಯಬೇಕಿದೆ ಪುಟ್ಟಮ್ಮಗಳಿಂದ ಆ ಮನತುಂಬುವ ನಗುವನ್ನು,

ಅರ್ಥ ಮಾಡಿಕೊಳ್ಳಬೇಕಿದೆ ಬಂಗಾರಿಗಳಿಂದ ಕಲೆತು ತಿನ್ನುವುದನ್ನು,

ಗೊತ್ತು ಮಾಡಿಕೊಳ್ಳಬೇಕಿದೆ ಚಿನ್ನುಗಳಿಂದ ಜಗದ ಸಮಾನತೆಯನ್ನು,

ನೋಡಬೇಕಿದೆ ತೆರೆದ ಕಣ್ಣುಗಳಿಂದ ಆ ಹಸುಳೆಗಳ ಚಿಲಿಪಿಲಿಯನ್ನು,

ಸವಿಯಬೇಕಿದೆ ಎಳೆಯರಿಂದ ತಿನ್ನುವ ಪರಿಯನ್ನು,

ಬದುಕಬೇಕಿದೆ ಆ ಮುದ್ದುಮರಿಗಳ ಚಟುವಟಿಕೆಯಂತೆ,

ಕುಣಿಯಬೇಕಿದೆ ಆ ಚಿಣ್ಣಾರಿಗಳ ಚಿಗರೆಯಂತೆ,

ಹಿರಿಯರ ಅನುಭವ, ಕಿರಿಯರ ಹೊಸತನ, ಮಕ್ಕಳ ಮುಗ್ಧತೆ,
ನಮಗೆ ಪಾಠವಾಗಬೇಕಿದೆ,…….

ಮುಂದಿನ ಯೋಚನೆಗಳಿಲ್ಲದ,
ಹಿಂದಿನ ನೆನಪುಗಳಿಲ್ಲದ,
ಭವಿಷ್ಯದ ಯೋಜನೆಗಳಿಲ್ಲದ,
ಇಂದಿನ ಕನಸುಗಳಿಲ್ಲದ,

ಅತಿಯಾದ ಆಸೆಗಳಿಲ್ಲದ,
ಹೆಚ್ಚಿನ ನಿರಾಸೆಗಳಿಲ್ಲದ,
ಶ್ರೀಮಂತಿಕೆಯ ಮೋಹವಿಲ್ಲದ, ಬಡತನದ ನೋವೇ ಗೊತ್ತಾಗದ,

ದ್ವೇಷದ ಅರಿವಿಲ್ಲದ,
ಪ್ರೀತಿಯ ಆಳ ಅರಿಯದ,
ಅಹಂಕಾರದ ಸೋಂಕಿಲ್ಲದ,
ಮುಗ್ಧತೆಯ ತಿಳಿವಳಿಕೆ ಇಲ್ಲದ,

ಜಾತಿ ಗೊತ್ತಿರದ,
ಧರ್ಮ ಅರ್ಥವಾಗದ,
ರಾಜಕಾರಣ ತಿಳಿಯದ,
ಆಡಳಿತ ಅರಿವಾಗದ,

ತೆರಿಗೆ ಕಟ್ಟದ,
ದುಡ್ಡು ಮಾಡದ,
ಏಳುವ ಎಚ್ಚರವಿರದ,
ಬೀಳುವ ಭಯವಿರದ,

ಮೋಸ ಗೊತ್ತಾಗದ,
ವಂಚನೆ ತಿಳಿಯದ,
ಕೆಲಸದ ಬಗ್ಗೆ ಯೋಚಿಸದ,
ಆಟದ ಬಗ್ಗೆ ಒಲವಿರುವ,

ನಿದ್ದೆ ಬಂದಾಗ ಮಲಗುವ,
ಎದ್ದಾಗ ಬದುಕುವ,
ನಾಳೆಯ ನಿರೀಕ್ಷೆಗಳಿಲ್ಲದ,
ಇಂದಿನ ಒತ್ತಡಗಳಿಲ್ಲದ,

ಆರೋಗ್ಯದ ಕಾಳಜಿ ಇಲ್ಲದ, ಅನಾರೋಗ್ಯದ ಭೀತಿ ಇಲ್ಲದ,
ಸಂಬಂಧಗಳ ರಗಳೆ ಇಲ್ಲದ,
ನಿಯಮಗಳ ಬಂಧವಿಲ್ಲದ,

ನಗು ಬಂದಾಗ ನಗುವ,
ಅಳು ಬಂದಾಗ ಅಳುವ,
ಮುಖವಾಡವಿಲ್ಲದ,
ಸಹಜ ಸ್ವಾಭಾವಿಕ……

ಆ ನನ್ನ ಬಾಲ್ಯವೇ ಮತ್ತೊಮ್ಮೆ ಬಾ,
ಆ ನಿನ್ನ ಮುಗ್ಧತೆ ನೆನಪಿಸು ಬಾ,

ಈಗ ನನ್ನ ದೇಹ ಮನಸ್ಸುಗಳು
ಕಲ್ಮಷಗೊಂಡಿವೆ,
ಈ ಯಾತನೆ ಸಹಿಸಲಾಗುತ್ತಿಲ್ಲ.
ನನ್ನರಿವೇ ನನ್ನನ್ನು ಕೊಲ್ಲುತ್ತಿದೆ.
ಅದನ್ನು ತಡೆಯಲಾದರೂ,,,,,

ಮತ್ತೊಮ್ಮೆ ಬಾ ನನ್ನ ಮುದ್ದು ಬಾಲ್ಯವೇ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

8 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

8 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

13 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

15 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

18 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

19 hours ago