Categories: ಲೇಖನ

ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು

ಮುದ್ದು ಬಾಲ್ಯ……..

ದೊಡ್ಡವರ ದಡ್ಡತನ – ಬುದ್ದಿ ಇರುವವರ ಕಳ್ಳತನ – ಓದಿದವರ ಭ್ರಷ್ಟತನ – ಅಧಿಕಾರಕ್ಕೇರಿದವರ ಅಸಭ್ಯತನ – ನಮ್ಮ ಮೂರ್ಖತನಗಳಿಗೆ ಮಕ್ಕಳು ಪಾಠವಾಗಬಹುದೇ……

ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು,

ಅರಿಯಬೇಕಿದೆ ಚಿಂಟುಗಳಿಂದ ಆ ಮುಗ್ಧ ಮನಸ್ಸಿನ ಗುಟ್ಟನ್ನು,

ಕಲಿಯಬೇಕಿದೆ ಪುಟ್ಟಮ್ಮಗಳಿಂದ ಆ ಮನತುಂಬುವ ನಗುವನ್ನು,

ಅರ್ಥ ಮಾಡಿಕೊಳ್ಳಬೇಕಿದೆ ಬಂಗಾರಿಗಳಿಂದ ಕಲೆತು ತಿನ್ನುವುದನ್ನು,

ಗೊತ್ತು ಮಾಡಿಕೊಳ್ಳಬೇಕಿದೆ ಚಿನ್ನುಗಳಿಂದ ಜಗದ ಸಮಾನತೆಯನ್ನು,

ನೋಡಬೇಕಿದೆ ತೆರೆದ ಕಣ್ಣುಗಳಿಂದ ಆ ಹಸುಳೆಗಳ ಚಿಲಿಪಿಲಿಯನ್ನು,

ಸವಿಯಬೇಕಿದೆ ಎಳೆಯರಿಂದ ತಿನ್ನುವ ಪರಿಯನ್ನು,

ಬದುಕಬೇಕಿದೆ ಆ ಮುದ್ದುಮರಿಗಳ ಚಟುವಟಿಕೆಯಂತೆ,

ಕುಣಿಯಬೇಕಿದೆ ಆ ಚಿಣ್ಣಾರಿಗಳ ಚಿಗರೆಯಂತೆ,

ಹಿರಿಯರ ಅನುಭವ, ಕಿರಿಯರ ಹೊಸತನ, ಮಕ್ಕಳ ಮುಗ್ಧತೆ,
ನಮಗೆ ಪಾಠವಾಗಬೇಕಿದೆ,…….

ಮುಂದಿನ ಯೋಚನೆಗಳಿಲ್ಲದ,
ಹಿಂದಿನ ನೆನಪುಗಳಿಲ್ಲದ,
ಭವಿಷ್ಯದ ಯೋಜನೆಗಳಿಲ್ಲದ,
ಇಂದಿನ ಕನಸುಗಳಿಲ್ಲದ,

ಅತಿಯಾದ ಆಸೆಗಳಿಲ್ಲದ,
ಹೆಚ್ಚಿನ ನಿರಾಸೆಗಳಿಲ್ಲದ,
ಶ್ರೀಮಂತಿಕೆಯ ಮೋಹವಿಲ್ಲದ, ಬಡತನದ ನೋವೇ ಗೊತ್ತಾಗದ,

ದ್ವೇಷದ ಅರಿವಿಲ್ಲದ,
ಪ್ರೀತಿಯ ಆಳ ಅರಿಯದ,
ಅಹಂಕಾರದ ಸೋಂಕಿಲ್ಲದ,
ಮುಗ್ಧತೆಯ ತಿಳಿವಳಿಕೆ ಇಲ್ಲದ,

ಜಾತಿ ಗೊತ್ತಿರದ,
ಧರ್ಮ ಅರ್ಥವಾಗದ,
ರಾಜಕಾರಣ ತಿಳಿಯದ,
ಆಡಳಿತ ಅರಿವಾಗದ,

ತೆರಿಗೆ ಕಟ್ಟದ,
ದುಡ್ಡು ಮಾಡದ,
ಏಳುವ ಎಚ್ಚರವಿರದ,
ಬೀಳುವ ಭಯವಿರದ,

ಮೋಸ ಗೊತ್ತಾಗದ,
ವಂಚನೆ ತಿಳಿಯದ,
ಕೆಲಸದ ಬಗ್ಗೆ ಯೋಚಿಸದ,
ಆಟದ ಬಗ್ಗೆ ಒಲವಿರುವ,

ನಿದ್ದೆ ಬಂದಾಗ ಮಲಗುವ,
ಎದ್ದಾಗ ಬದುಕುವ,
ನಾಳೆಯ ನಿರೀಕ್ಷೆಗಳಿಲ್ಲದ,
ಇಂದಿನ ಒತ್ತಡಗಳಿಲ್ಲದ,

ಆರೋಗ್ಯದ ಕಾಳಜಿ ಇಲ್ಲದ, ಅನಾರೋಗ್ಯದ ಭೀತಿ ಇಲ್ಲದ,
ಸಂಬಂಧಗಳ ರಗಳೆ ಇಲ್ಲದ,
ನಿಯಮಗಳ ಬಂಧವಿಲ್ಲದ,

ನಗು ಬಂದಾಗ ನಗುವ,
ಅಳು ಬಂದಾಗ ಅಳುವ,
ಮುಖವಾಡವಿಲ್ಲದ,
ಸಹಜ ಸ್ವಾಭಾವಿಕ……

ಆ ನನ್ನ ಬಾಲ್ಯವೇ ಮತ್ತೊಮ್ಮೆ ಬಾ,
ಆ ನಿನ್ನ ಮುಗ್ಧತೆ ನೆನಪಿಸು ಬಾ,

ಈಗ ನನ್ನ ದೇಹ ಮನಸ್ಸುಗಳು
ಕಲ್ಮಷಗೊಂಡಿವೆ,
ಈ ಯಾತನೆ ಸಹಿಸಲಾಗುತ್ತಿಲ್ಲ.
ನನ್ನರಿವೇ ನನ್ನನ್ನು ಕೊಲ್ಲುತ್ತಿದೆ.
ಅದನ್ನು ತಡೆಯಲಾದರೂ,,,,,

ಮತ್ತೊಮ್ಮೆ ಬಾ ನನ್ನ ಮುದ್ದು ಬಾಲ್ಯವೇ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

12 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

13 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

16 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

1 day ago