Categories: ಲೇಖನ

ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು

ಮುದ್ದು ಬಾಲ್ಯ……..

ದೊಡ್ಡವರ ದಡ್ಡತನ – ಬುದ್ದಿ ಇರುವವರ ಕಳ್ಳತನ – ಓದಿದವರ ಭ್ರಷ್ಟತನ – ಅಧಿಕಾರಕ್ಕೇರಿದವರ ಅಸಭ್ಯತನ – ನಮ್ಮ ಮೂರ್ಖತನಗಳಿಗೆ ಮಕ್ಕಳು ಪಾಠವಾಗಬಹುದೇ……

ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು,

ಅರಿಯಬೇಕಿದೆ ಚಿಂಟುಗಳಿಂದ ಆ ಮುಗ್ಧ ಮನಸ್ಸಿನ ಗುಟ್ಟನ್ನು,

ಕಲಿಯಬೇಕಿದೆ ಪುಟ್ಟಮ್ಮಗಳಿಂದ ಆ ಮನತುಂಬುವ ನಗುವನ್ನು,

ಅರ್ಥ ಮಾಡಿಕೊಳ್ಳಬೇಕಿದೆ ಬಂಗಾರಿಗಳಿಂದ ಕಲೆತು ತಿನ್ನುವುದನ್ನು,

ಗೊತ್ತು ಮಾಡಿಕೊಳ್ಳಬೇಕಿದೆ ಚಿನ್ನುಗಳಿಂದ ಜಗದ ಸಮಾನತೆಯನ್ನು,

ನೋಡಬೇಕಿದೆ ತೆರೆದ ಕಣ್ಣುಗಳಿಂದ ಆ ಹಸುಳೆಗಳ ಚಿಲಿಪಿಲಿಯನ್ನು,

ಸವಿಯಬೇಕಿದೆ ಎಳೆಯರಿಂದ ತಿನ್ನುವ ಪರಿಯನ್ನು,

ಬದುಕಬೇಕಿದೆ ಆ ಮುದ್ದುಮರಿಗಳ ಚಟುವಟಿಕೆಯಂತೆ,

ಕುಣಿಯಬೇಕಿದೆ ಆ ಚಿಣ್ಣಾರಿಗಳ ಚಿಗರೆಯಂತೆ,

ಹಿರಿಯರ ಅನುಭವ, ಕಿರಿಯರ ಹೊಸತನ, ಮಕ್ಕಳ ಮುಗ್ಧತೆ,
ನಮಗೆ ಪಾಠವಾಗಬೇಕಿದೆ,…….

ಮುಂದಿನ ಯೋಚನೆಗಳಿಲ್ಲದ,
ಹಿಂದಿನ ನೆನಪುಗಳಿಲ್ಲದ,
ಭವಿಷ್ಯದ ಯೋಜನೆಗಳಿಲ್ಲದ,
ಇಂದಿನ ಕನಸುಗಳಿಲ್ಲದ,

ಅತಿಯಾದ ಆಸೆಗಳಿಲ್ಲದ,
ಹೆಚ್ಚಿನ ನಿರಾಸೆಗಳಿಲ್ಲದ,
ಶ್ರೀಮಂತಿಕೆಯ ಮೋಹವಿಲ್ಲದ, ಬಡತನದ ನೋವೇ ಗೊತ್ತಾಗದ,

ದ್ವೇಷದ ಅರಿವಿಲ್ಲದ,
ಪ್ರೀತಿಯ ಆಳ ಅರಿಯದ,
ಅಹಂಕಾರದ ಸೋಂಕಿಲ್ಲದ,
ಮುಗ್ಧತೆಯ ತಿಳಿವಳಿಕೆ ಇಲ್ಲದ,

ಜಾತಿ ಗೊತ್ತಿರದ,
ಧರ್ಮ ಅರ್ಥವಾಗದ,
ರಾಜಕಾರಣ ತಿಳಿಯದ,
ಆಡಳಿತ ಅರಿವಾಗದ,

ತೆರಿಗೆ ಕಟ್ಟದ,
ದುಡ್ಡು ಮಾಡದ,
ಏಳುವ ಎಚ್ಚರವಿರದ,
ಬೀಳುವ ಭಯವಿರದ,

ಮೋಸ ಗೊತ್ತಾಗದ,
ವಂಚನೆ ತಿಳಿಯದ,
ಕೆಲಸದ ಬಗ್ಗೆ ಯೋಚಿಸದ,
ಆಟದ ಬಗ್ಗೆ ಒಲವಿರುವ,

ನಿದ್ದೆ ಬಂದಾಗ ಮಲಗುವ,
ಎದ್ದಾಗ ಬದುಕುವ,
ನಾಳೆಯ ನಿರೀಕ್ಷೆಗಳಿಲ್ಲದ,
ಇಂದಿನ ಒತ್ತಡಗಳಿಲ್ಲದ,

ಆರೋಗ್ಯದ ಕಾಳಜಿ ಇಲ್ಲದ, ಅನಾರೋಗ್ಯದ ಭೀತಿ ಇಲ್ಲದ,
ಸಂಬಂಧಗಳ ರಗಳೆ ಇಲ್ಲದ,
ನಿಯಮಗಳ ಬಂಧವಿಲ್ಲದ,

ನಗು ಬಂದಾಗ ನಗುವ,
ಅಳು ಬಂದಾಗ ಅಳುವ,
ಮುಖವಾಡವಿಲ್ಲದ,
ಸಹಜ ಸ್ವಾಭಾವಿಕ……

ಆ ನನ್ನ ಬಾಲ್ಯವೇ ಮತ್ತೊಮ್ಮೆ ಬಾ,
ಆ ನಿನ್ನ ಮುಗ್ಧತೆ ನೆನಪಿಸು ಬಾ,

ಈಗ ನನ್ನ ದೇಹ ಮನಸ್ಸುಗಳು
ಕಲ್ಮಷಗೊಂಡಿವೆ,
ಈ ಯಾತನೆ ಸಹಿಸಲಾಗುತ್ತಿಲ್ಲ.
ನನ್ನರಿವೇ ನನ್ನನ್ನು ಕೊಲ್ಲುತ್ತಿದೆ.
ಅದನ್ನು ತಡೆಯಲಾದರೂ,,,,,

ಮತ್ತೊಮ್ಮೆ ಬಾ ನನ್ನ ಮುದ್ದು ಬಾಲ್ಯವೇ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 hour ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

4 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

5 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

8 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

8 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

8 hours ago