Categories: ಲೇಖನ

ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು

ಮುದ್ದು ಬಾಲ್ಯ……..

ದೊಡ್ಡವರ ದಡ್ಡತನ – ಬುದ್ದಿ ಇರುವವರ ಕಳ್ಳತನ – ಓದಿದವರ ಭ್ರಷ್ಟತನ – ಅಧಿಕಾರಕ್ಕೇರಿದವರ ಅಸಭ್ಯತನ – ನಮ್ಮ ಮೂರ್ಖತನಗಳಿಗೆ ಮಕ್ಕಳು ಪಾಠವಾಗಬಹುದೇ……

ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು,

ಅರಿಯಬೇಕಿದೆ ಚಿಂಟುಗಳಿಂದ ಆ ಮುಗ್ಧ ಮನಸ್ಸಿನ ಗುಟ್ಟನ್ನು,

ಕಲಿಯಬೇಕಿದೆ ಪುಟ್ಟಮ್ಮಗಳಿಂದ ಆ ಮನತುಂಬುವ ನಗುವನ್ನು,

ಅರ್ಥ ಮಾಡಿಕೊಳ್ಳಬೇಕಿದೆ ಬಂಗಾರಿಗಳಿಂದ ಕಲೆತು ತಿನ್ನುವುದನ್ನು,

ಗೊತ್ತು ಮಾಡಿಕೊಳ್ಳಬೇಕಿದೆ ಚಿನ್ನುಗಳಿಂದ ಜಗದ ಸಮಾನತೆಯನ್ನು,

ನೋಡಬೇಕಿದೆ ತೆರೆದ ಕಣ್ಣುಗಳಿಂದ ಆ ಹಸುಳೆಗಳ ಚಿಲಿಪಿಲಿಯನ್ನು,

ಸವಿಯಬೇಕಿದೆ ಎಳೆಯರಿಂದ ತಿನ್ನುವ ಪರಿಯನ್ನು,

ಬದುಕಬೇಕಿದೆ ಆ ಮುದ್ದುಮರಿಗಳ ಚಟುವಟಿಕೆಯಂತೆ,

ಕುಣಿಯಬೇಕಿದೆ ಆ ಚಿಣ್ಣಾರಿಗಳ ಚಿಗರೆಯಂತೆ,

ಹಿರಿಯರ ಅನುಭವ, ಕಿರಿಯರ ಹೊಸತನ, ಮಕ್ಕಳ ಮುಗ್ಧತೆ,
ನಮಗೆ ಪಾಠವಾಗಬೇಕಿದೆ,…….

ಮುಂದಿನ ಯೋಚನೆಗಳಿಲ್ಲದ,
ಹಿಂದಿನ ನೆನಪುಗಳಿಲ್ಲದ,
ಭವಿಷ್ಯದ ಯೋಜನೆಗಳಿಲ್ಲದ,
ಇಂದಿನ ಕನಸುಗಳಿಲ್ಲದ,

ಅತಿಯಾದ ಆಸೆಗಳಿಲ್ಲದ,
ಹೆಚ್ಚಿನ ನಿರಾಸೆಗಳಿಲ್ಲದ,
ಶ್ರೀಮಂತಿಕೆಯ ಮೋಹವಿಲ್ಲದ, ಬಡತನದ ನೋವೇ ಗೊತ್ತಾಗದ,

ದ್ವೇಷದ ಅರಿವಿಲ್ಲದ,
ಪ್ರೀತಿಯ ಆಳ ಅರಿಯದ,
ಅಹಂಕಾರದ ಸೋಂಕಿಲ್ಲದ,
ಮುಗ್ಧತೆಯ ತಿಳಿವಳಿಕೆ ಇಲ್ಲದ,

ಜಾತಿ ಗೊತ್ತಿರದ,
ಧರ್ಮ ಅರ್ಥವಾಗದ,
ರಾಜಕಾರಣ ತಿಳಿಯದ,
ಆಡಳಿತ ಅರಿವಾಗದ,

ತೆರಿಗೆ ಕಟ್ಟದ,
ದುಡ್ಡು ಮಾಡದ,
ಏಳುವ ಎಚ್ಚರವಿರದ,
ಬೀಳುವ ಭಯವಿರದ,

ಮೋಸ ಗೊತ್ತಾಗದ,
ವಂಚನೆ ತಿಳಿಯದ,
ಕೆಲಸದ ಬಗ್ಗೆ ಯೋಚಿಸದ,
ಆಟದ ಬಗ್ಗೆ ಒಲವಿರುವ,

ನಿದ್ದೆ ಬಂದಾಗ ಮಲಗುವ,
ಎದ್ದಾಗ ಬದುಕುವ,
ನಾಳೆಯ ನಿರೀಕ್ಷೆಗಳಿಲ್ಲದ,
ಇಂದಿನ ಒತ್ತಡಗಳಿಲ್ಲದ,

ಆರೋಗ್ಯದ ಕಾಳಜಿ ಇಲ್ಲದ, ಅನಾರೋಗ್ಯದ ಭೀತಿ ಇಲ್ಲದ,
ಸಂಬಂಧಗಳ ರಗಳೆ ಇಲ್ಲದ,
ನಿಯಮಗಳ ಬಂಧವಿಲ್ಲದ,

ನಗು ಬಂದಾಗ ನಗುವ,
ಅಳು ಬಂದಾಗ ಅಳುವ,
ಮುಖವಾಡವಿಲ್ಲದ,
ಸಹಜ ಸ್ವಾಭಾವಿಕ……

ಆ ನನ್ನ ಬಾಲ್ಯವೇ ಮತ್ತೊಮ್ಮೆ ಬಾ,
ಆ ನಿನ್ನ ಮುಗ್ಧತೆ ನೆನಪಿಸು ಬಾ,

ಈಗ ನನ್ನ ದೇಹ ಮನಸ್ಸುಗಳು
ಕಲ್ಮಷಗೊಂಡಿವೆ,
ಈ ಯಾತನೆ ಸಹಿಸಲಾಗುತ್ತಿಲ್ಲ.
ನನ್ನರಿವೇ ನನ್ನನ್ನು ಕೊಲ್ಲುತ್ತಿದೆ.
ಅದನ್ನು ತಡೆಯಲಾದರೂ,,,,,

ಮತ್ತೊಮ್ಮೆ ಬಾ ನನ್ನ ಮುದ್ದು ಬಾಲ್ಯವೇ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

4 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

7 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

9 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

10 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

16 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

17 hours ago