ಮುದ್ದು ಬಾಲ್ಯ……..
ದೊಡ್ಡವರ ದಡ್ಡತನ – ಬುದ್ದಿ ಇರುವವರ ಕಳ್ಳತನ – ಓದಿದವರ ಭ್ರಷ್ಟತನ – ಅಧಿಕಾರಕ್ಕೇರಿದವರ ಅಸಭ್ಯತನ – ನಮ್ಮ ಮೂರ್ಖತನಗಳಿಗೆ ಮಕ್ಕಳು ಪಾಠವಾಗಬಹುದೇ……
ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು,
ಅರಿಯಬೇಕಿದೆ ಚಿಂಟುಗಳಿಂದ ಆ ಮುಗ್ಧ ಮನಸ್ಸಿನ ಗುಟ್ಟನ್ನು,
ಕಲಿಯಬೇಕಿದೆ ಪುಟ್ಟಮ್ಮಗಳಿಂದ ಆ ಮನತುಂಬುವ ನಗುವನ್ನು,
ಅರ್ಥ ಮಾಡಿಕೊಳ್ಳಬೇಕಿದೆ ಬಂಗಾರಿಗಳಿಂದ ಕಲೆತು ತಿನ್ನುವುದನ್ನು,
ಗೊತ್ತು ಮಾಡಿಕೊಳ್ಳಬೇಕಿದೆ ಚಿನ್ನುಗಳಿಂದ ಜಗದ ಸಮಾನತೆಯನ್ನು,
ನೋಡಬೇಕಿದೆ ತೆರೆದ ಕಣ್ಣುಗಳಿಂದ ಆ ಹಸುಳೆಗಳ ಚಿಲಿಪಿಲಿಯನ್ನು,
ಸವಿಯಬೇಕಿದೆ ಎಳೆಯರಿಂದ ತಿನ್ನುವ ಪರಿಯನ್ನು,
ಬದುಕಬೇಕಿದೆ ಆ ಮುದ್ದುಮರಿಗಳ ಚಟುವಟಿಕೆಯಂತೆ,
ಕುಣಿಯಬೇಕಿದೆ ಆ ಚಿಣ್ಣಾರಿಗಳ ಚಿಗರೆಯಂತೆ,
ಹಿರಿಯರ ಅನುಭವ, ಕಿರಿಯರ ಹೊಸತನ, ಮಕ್ಕಳ ಮುಗ್ಧತೆ,
ನಮಗೆ ಪಾಠವಾಗಬೇಕಿದೆ,…….
ಮುಂದಿನ ಯೋಚನೆಗಳಿಲ್ಲದ,
ಹಿಂದಿನ ನೆನಪುಗಳಿಲ್ಲದ,
ಭವಿಷ್ಯದ ಯೋಜನೆಗಳಿಲ್ಲದ,
ಇಂದಿನ ಕನಸುಗಳಿಲ್ಲದ,
ಅತಿಯಾದ ಆಸೆಗಳಿಲ್ಲದ,
ಹೆಚ್ಚಿನ ನಿರಾಸೆಗಳಿಲ್ಲದ,
ಶ್ರೀಮಂತಿಕೆಯ ಮೋಹವಿಲ್ಲದ, ಬಡತನದ ನೋವೇ ಗೊತ್ತಾಗದ,
ದ್ವೇಷದ ಅರಿವಿಲ್ಲದ,
ಪ್ರೀತಿಯ ಆಳ ಅರಿಯದ,
ಅಹಂಕಾರದ ಸೋಂಕಿಲ್ಲದ,
ಮುಗ್ಧತೆಯ ತಿಳಿವಳಿಕೆ ಇಲ್ಲದ,
ಜಾತಿ ಗೊತ್ತಿರದ,
ಧರ್ಮ ಅರ್ಥವಾಗದ,
ರಾಜಕಾರಣ ತಿಳಿಯದ,
ಆಡಳಿತ ಅರಿವಾಗದ,
ತೆರಿಗೆ ಕಟ್ಟದ,
ದುಡ್ಡು ಮಾಡದ,
ಏಳುವ ಎಚ್ಚರವಿರದ,
ಬೀಳುವ ಭಯವಿರದ,
ಮೋಸ ಗೊತ್ತಾಗದ,
ವಂಚನೆ ತಿಳಿಯದ,
ಕೆಲಸದ ಬಗ್ಗೆ ಯೋಚಿಸದ,
ಆಟದ ಬಗ್ಗೆ ಒಲವಿರುವ,
ನಿದ್ದೆ ಬಂದಾಗ ಮಲಗುವ,
ಎದ್ದಾಗ ಬದುಕುವ,
ನಾಳೆಯ ನಿರೀಕ್ಷೆಗಳಿಲ್ಲದ,
ಇಂದಿನ ಒತ್ತಡಗಳಿಲ್ಲದ,
ಆರೋಗ್ಯದ ಕಾಳಜಿ ಇಲ್ಲದ, ಅನಾರೋಗ್ಯದ ಭೀತಿ ಇಲ್ಲದ,
ಸಂಬಂಧಗಳ ರಗಳೆ ಇಲ್ಲದ,
ನಿಯಮಗಳ ಬಂಧವಿಲ್ಲದ,
ನಗು ಬಂದಾಗ ನಗುವ,
ಅಳು ಬಂದಾಗ ಅಳುವ,
ಮುಖವಾಡವಿಲ್ಲದ,
ಸಹಜ ಸ್ವಾಭಾವಿಕ……
ಆ ನನ್ನ ಬಾಲ್ಯವೇ ಮತ್ತೊಮ್ಮೆ ಬಾ,
ಆ ನಿನ್ನ ಮುಗ್ಧತೆ ನೆನಪಿಸು ಬಾ,
ಈಗ ನನ್ನ ದೇಹ ಮನಸ್ಸುಗಳು
ಕಲ್ಮಷಗೊಂಡಿವೆ,
ಈ ಯಾತನೆ ಸಹಿಸಲಾಗುತ್ತಿಲ್ಲ.
ನನ್ನರಿವೇ ನನ್ನನ್ನು ಕೊಲ್ಲುತ್ತಿದೆ.
ಅದನ್ನು ತಡೆಯಲಾದರೂ,,,,,
ಮತ್ತೊಮ್ಮೆ ಬಾ ನನ್ನ ಮುದ್ದು ಬಾಲ್ಯವೇ…….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್. ಕೆ
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…