Categories: ಲೇಖನ

ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು

ಮುದ್ದು ಬಾಲ್ಯ……..

ದೊಡ್ಡವರ ದಡ್ಡತನ – ಬುದ್ದಿ ಇರುವವರ ಕಳ್ಳತನ – ಓದಿದವರ ಭ್ರಷ್ಟತನ – ಅಧಿಕಾರಕ್ಕೇರಿದವರ ಅಸಭ್ಯತನ – ನಮ್ಮ ಮೂರ್ಖತನಗಳಿಗೆ ಮಕ್ಕಳು ಪಾಠವಾಗಬಹುದೇ……

ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು,

ಅರಿಯಬೇಕಿದೆ ಚಿಂಟುಗಳಿಂದ ಆ ಮುಗ್ಧ ಮನಸ್ಸಿನ ಗುಟ್ಟನ್ನು,

ಕಲಿಯಬೇಕಿದೆ ಪುಟ್ಟಮ್ಮಗಳಿಂದ ಆ ಮನತುಂಬುವ ನಗುವನ್ನು,

ಅರ್ಥ ಮಾಡಿಕೊಳ್ಳಬೇಕಿದೆ ಬಂಗಾರಿಗಳಿಂದ ಕಲೆತು ತಿನ್ನುವುದನ್ನು,

ಗೊತ್ತು ಮಾಡಿಕೊಳ್ಳಬೇಕಿದೆ ಚಿನ್ನುಗಳಿಂದ ಜಗದ ಸಮಾನತೆಯನ್ನು,

ನೋಡಬೇಕಿದೆ ತೆರೆದ ಕಣ್ಣುಗಳಿಂದ ಆ ಹಸುಳೆಗಳ ಚಿಲಿಪಿಲಿಯನ್ನು,

ಸವಿಯಬೇಕಿದೆ ಎಳೆಯರಿಂದ ತಿನ್ನುವ ಪರಿಯನ್ನು,

ಬದುಕಬೇಕಿದೆ ಆ ಮುದ್ದುಮರಿಗಳ ಚಟುವಟಿಕೆಯಂತೆ,

ಕುಣಿಯಬೇಕಿದೆ ಆ ಚಿಣ್ಣಾರಿಗಳ ಚಿಗರೆಯಂತೆ,

ಹಿರಿಯರ ಅನುಭವ, ಕಿರಿಯರ ಹೊಸತನ, ಮಕ್ಕಳ ಮುಗ್ಧತೆ,
ನಮಗೆ ಪಾಠವಾಗಬೇಕಿದೆ,…….

ಮುಂದಿನ ಯೋಚನೆಗಳಿಲ್ಲದ,
ಹಿಂದಿನ ನೆನಪುಗಳಿಲ್ಲದ,
ಭವಿಷ್ಯದ ಯೋಜನೆಗಳಿಲ್ಲದ,
ಇಂದಿನ ಕನಸುಗಳಿಲ್ಲದ,

ಅತಿಯಾದ ಆಸೆಗಳಿಲ್ಲದ,
ಹೆಚ್ಚಿನ ನಿರಾಸೆಗಳಿಲ್ಲದ,
ಶ್ರೀಮಂತಿಕೆಯ ಮೋಹವಿಲ್ಲದ, ಬಡತನದ ನೋವೇ ಗೊತ್ತಾಗದ,

ದ್ವೇಷದ ಅರಿವಿಲ್ಲದ,
ಪ್ರೀತಿಯ ಆಳ ಅರಿಯದ,
ಅಹಂಕಾರದ ಸೋಂಕಿಲ್ಲದ,
ಮುಗ್ಧತೆಯ ತಿಳಿವಳಿಕೆ ಇಲ್ಲದ,

ಜಾತಿ ಗೊತ್ತಿರದ,
ಧರ್ಮ ಅರ್ಥವಾಗದ,
ರಾಜಕಾರಣ ತಿಳಿಯದ,
ಆಡಳಿತ ಅರಿವಾಗದ,

ತೆರಿಗೆ ಕಟ್ಟದ,
ದುಡ್ಡು ಮಾಡದ,
ಏಳುವ ಎಚ್ಚರವಿರದ,
ಬೀಳುವ ಭಯವಿರದ,

ಮೋಸ ಗೊತ್ತಾಗದ,
ವಂಚನೆ ತಿಳಿಯದ,
ಕೆಲಸದ ಬಗ್ಗೆ ಯೋಚಿಸದ,
ಆಟದ ಬಗ್ಗೆ ಒಲವಿರುವ,

ನಿದ್ದೆ ಬಂದಾಗ ಮಲಗುವ,
ಎದ್ದಾಗ ಬದುಕುವ,
ನಾಳೆಯ ನಿರೀಕ್ಷೆಗಳಿಲ್ಲದ,
ಇಂದಿನ ಒತ್ತಡಗಳಿಲ್ಲದ,

ಆರೋಗ್ಯದ ಕಾಳಜಿ ಇಲ್ಲದ, ಅನಾರೋಗ್ಯದ ಭೀತಿ ಇಲ್ಲದ,
ಸಂಬಂಧಗಳ ರಗಳೆ ಇಲ್ಲದ,
ನಿಯಮಗಳ ಬಂಧವಿಲ್ಲದ,

ನಗು ಬಂದಾಗ ನಗುವ,
ಅಳು ಬಂದಾಗ ಅಳುವ,
ಮುಖವಾಡವಿಲ್ಲದ,
ಸಹಜ ಸ್ವಾಭಾವಿಕ……

ಆ ನನ್ನ ಬಾಲ್ಯವೇ ಮತ್ತೊಮ್ಮೆ ಬಾ,
ಆ ನಿನ್ನ ಮುಗ್ಧತೆ ನೆನಪಿಸು ಬಾ,

ಈಗ ನನ್ನ ದೇಹ ಮನಸ್ಸುಗಳು
ಕಲ್ಮಷಗೊಂಡಿವೆ,
ಈ ಯಾತನೆ ಸಹಿಸಲಾಗುತ್ತಿಲ್ಲ.
ನನ್ನರಿವೇ ನನ್ನನ್ನು ಕೊಲ್ಲುತ್ತಿದೆ.
ಅದನ್ನು ತಡೆಯಲಾದರೂ,,,,,

ಮತ್ತೊಮ್ಮೆ ಬಾ ನನ್ನ ಮುದ್ದು ಬಾಲ್ಯವೇ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

4 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

14 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

15 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago