ಮುದ್ದು ಬಾಲ್ಯ……..
ದೊಡ್ಡವರ ದಡ್ಡತನ – ಬುದ್ದಿ ಇರುವವರ ಕಳ್ಳತನ – ಓದಿದವರ ಭ್ರಷ್ಟತನ – ಅಧಿಕಾರಕ್ಕೇರಿದವರ ಅಸಭ್ಯತನ – ನಮ್ಮ ಮೂರ್ಖತನಗಳಿಗೆ ಮಕ್ಕಳು ಪಾಠವಾಗಬಹುದೇ……
ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು,
ಅರಿಯಬೇಕಿದೆ ಚಿಂಟುಗಳಿಂದ ಆ ಮುಗ್ಧ ಮನಸ್ಸಿನ ಗುಟ್ಟನ್ನು,
ಕಲಿಯಬೇಕಿದೆ ಪುಟ್ಟಮ್ಮಗಳಿಂದ ಆ ಮನತುಂಬುವ ನಗುವನ್ನು,
ಅರ್ಥ ಮಾಡಿಕೊಳ್ಳಬೇಕಿದೆ ಬಂಗಾರಿಗಳಿಂದ ಕಲೆತು ತಿನ್ನುವುದನ್ನು,
ಗೊತ್ತು ಮಾಡಿಕೊಳ್ಳಬೇಕಿದೆ ಚಿನ್ನುಗಳಿಂದ ಜಗದ ಸಮಾನತೆಯನ್ನು,
ನೋಡಬೇಕಿದೆ ತೆರೆದ ಕಣ್ಣುಗಳಿಂದ ಆ ಹಸುಳೆಗಳ ಚಿಲಿಪಿಲಿಯನ್ನು,
ಸವಿಯಬೇಕಿದೆ ಎಳೆಯರಿಂದ ತಿನ್ನುವ ಪರಿಯನ್ನು,
ಬದುಕಬೇಕಿದೆ ಆ ಮುದ್ದುಮರಿಗಳ ಚಟುವಟಿಕೆಯಂತೆ,
ಕುಣಿಯಬೇಕಿದೆ ಆ ಚಿಣ್ಣಾರಿಗಳ ಚಿಗರೆಯಂತೆ,
ಹಿರಿಯರ ಅನುಭವ, ಕಿರಿಯರ ಹೊಸತನ, ಮಕ್ಕಳ ಮುಗ್ಧತೆ,
ನಮಗೆ ಪಾಠವಾಗಬೇಕಿದೆ,…….
ಮುಂದಿನ ಯೋಚನೆಗಳಿಲ್ಲದ,
ಹಿಂದಿನ ನೆನಪುಗಳಿಲ್ಲದ,
ಭವಿಷ್ಯದ ಯೋಜನೆಗಳಿಲ್ಲದ,
ಇಂದಿನ ಕನಸುಗಳಿಲ್ಲದ,
ಅತಿಯಾದ ಆಸೆಗಳಿಲ್ಲದ,
ಹೆಚ್ಚಿನ ನಿರಾಸೆಗಳಿಲ್ಲದ,
ಶ್ರೀಮಂತಿಕೆಯ ಮೋಹವಿಲ್ಲದ, ಬಡತನದ ನೋವೇ ಗೊತ್ತಾಗದ,
ದ್ವೇಷದ ಅರಿವಿಲ್ಲದ,
ಪ್ರೀತಿಯ ಆಳ ಅರಿಯದ,
ಅಹಂಕಾರದ ಸೋಂಕಿಲ್ಲದ,
ಮುಗ್ಧತೆಯ ತಿಳಿವಳಿಕೆ ಇಲ್ಲದ,
ಜಾತಿ ಗೊತ್ತಿರದ,
ಧರ್ಮ ಅರ್ಥವಾಗದ,
ರಾಜಕಾರಣ ತಿಳಿಯದ,
ಆಡಳಿತ ಅರಿವಾಗದ,
ತೆರಿಗೆ ಕಟ್ಟದ,
ದುಡ್ಡು ಮಾಡದ,
ಏಳುವ ಎಚ್ಚರವಿರದ,
ಬೀಳುವ ಭಯವಿರದ,
ಮೋಸ ಗೊತ್ತಾಗದ,
ವಂಚನೆ ತಿಳಿಯದ,
ಕೆಲಸದ ಬಗ್ಗೆ ಯೋಚಿಸದ,
ಆಟದ ಬಗ್ಗೆ ಒಲವಿರುವ,
ನಿದ್ದೆ ಬಂದಾಗ ಮಲಗುವ,
ಎದ್ದಾಗ ಬದುಕುವ,
ನಾಳೆಯ ನಿರೀಕ್ಷೆಗಳಿಲ್ಲದ,
ಇಂದಿನ ಒತ್ತಡಗಳಿಲ್ಲದ,
ಆರೋಗ್ಯದ ಕಾಳಜಿ ಇಲ್ಲದ, ಅನಾರೋಗ್ಯದ ಭೀತಿ ಇಲ್ಲದ,
ಸಂಬಂಧಗಳ ರಗಳೆ ಇಲ್ಲದ,
ನಿಯಮಗಳ ಬಂಧವಿಲ್ಲದ,
ನಗು ಬಂದಾಗ ನಗುವ,
ಅಳು ಬಂದಾಗ ಅಳುವ,
ಮುಖವಾಡವಿಲ್ಲದ,
ಸಹಜ ಸ್ವಾಭಾವಿಕ……
ಆ ನನ್ನ ಬಾಲ್ಯವೇ ಮತ್ತೊಮ್ಮೆ ಬಾ,
ಆ ನಿನ್ನ ಮುಗ್ಧತೆ ನೆನಪಿಸು ಬಾ,
ಈಗ ನನ್ನ ದೇಹ ಮನಸ್ಸುಗಳು
ಕಲ್ಮಷಗೊಂಡಿವೆ,
ಈ ಯಾತನೆ ಸಹಿಸಲಾಗುತ್ತಿಲ್ಲ.
ನನ್ನರಿವೇ ನನ್ನನ್ನು ಕೊಲ್ಲುತ್ತಿದೆ.
ಅದನ್ನು ತಡೆಯಲಾದರೂ,,,,,
ಮತ್ತೊಮ್ಮೆ ಬಾ ನನ್ನ ಮುದ್ದು ಬಾಲ್ಯವೇ…….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್. ಕೆ
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…