Categories: ಲೇಖನ

ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು

ಮುದ್ದು ಬಾಲ್ಯ……..

ದೊಡ್ಡವರ ದಡ್ಡತನ – ಬುದ್ದಿ ಇರುವವರ ಕಳ್ಳತನ – ಓದಿದವರ ಭ್ರಷ್ಟತನ – ಅಧಿಕಾರಕ್ಕೇರಿದವರ ಅಸಭ್ಯತನ – ನಮ್ಮ ಮೂರ್ಖತನಗಳಿಗೆ ಮಕ್ಕಳು ಪಾಠವಾಗಬಹುದೇ……

ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು,

ಅರಿಯಬೇಕಿದೆ ಚಿಂಟುಗಳಿಂದ ಆ ಮುಗ್ಧ ಮನಸ್ಸಿನ ಗುಟ್ಟನ್ನು,

ಕಲಿಯಬೇಕಿದೆ ಪುಟ್ಟಮ್ಮಗಳಿಂದ ಆ ಮನತುಂಬುವ ನಗುವನ್ನು,

ಅರ್ಥ ಮಾಡಿಕೊಳ್ಳಬೇಕಿದೆ ಬಂಗಾರಿಗಳಿಂದ ಕಲೆತು ತಿನ್ನುವುದನ್ನು,

ಗೊತ್ತು ಮಾಡಿಕೊಳ್ಳಬೇಕಿದೆ ಚಿನ್ನುಗಳಿಂದ ಜಗದ ಸಮಾನತೆಯನ್ನು,

ನೋಡಬೇಕಿದೆ ತೆರೆದ ಕಣ್ಣುಗಳಿಂದ ಆ ಹಸುಳೆಗಳ ಚಿಲಿಪಿಲಿಯನ್ನು,

ಸವಿಯಬೇಕಿದೆ ಎಳೆಯರಿಂದ ತಿನ್ನುವ ಪರಿಯನ್ನು,

ಬದುಕಬೇಕಿದೆ ಆ ಮುದ್ದುಮರಿಗಳ ಚಟುವಟಿಕೆಯಂತೆ,

ಕುಣಿಯಬೇಕಿದೆ ಆ ಚಿಣ್ಣಾರಿಗಳ ಚಿಗರೆಯಂತೆ,

ಹಿರಿಯರ ಅನುಭವ, ಕಿರಿಯರ ಹೊಸತನ, ಮಕ್ಕಳ ಮುಗ್ಧತೆ,
ನಮಗೆ ಪಾಠವಾಗಬೇಕಿದೆ,…….

ಮುಂದಿನ ಯೋಚನೆಗಳಿಲ್ಲದ,
ಹಿಂದಿನ ನೆನಪುಗಳಿಲ್ಲದ,
ಭವಿಷ್ಯದ ಯೋಜನೆಗಳಿಲ್ಲದ,
ಇಂದಿನ ಕನಸುಗಳಿಲ್ಲದ,

ಅತಿಯಾದ ಆಸೆಗಳಿಲ್ಲದ,
ಹೆಚ್ಚಿನ ನಿರಾಸೆಗಳಿಲ್ಲದ,
ಶ್ರೀಮಂತಿಕೆಯ ಮೋಹವಿಲ್ಲದ, ಬಡತನದ ನೋವೇ ಗೊತ್ತಾಗದ,

ದ್ವೇಷದ ಅರಿವಿಲ್ಲದ,
ಪ್ರೀತಿಯ ಆಳ ಅರಿಯದ,
ಅಹಂಕಾರದ ಸೋಂಕಿಲ್ಲದ,
ಮುಗ್ಧತೆಯ ತಿಳಿವಳಿಕೆ ಇಲ್ಲದ,

ಜಾತಿ ಗೊತ್ತಿರದ,
ಧರ್ಮ ಅರ್ಥವಾಗದ,
ರಾಜಕಾರಣ ತಿಳಿಯದ,
ಆಡಳಿತ ಅರಿವಾಗದ,

ತೆರಿಗೆ ಕಟ್ಟದ,
ದುಡ್ಡು ಮಾಡದ,
ಏಳುವ ಎಚ್ಚರವಿರದ,
ಬೀಳುವ ಭಯವಿರದ,

ಮೋಸ ಗೊತ್ತಾಗದ,
ವಂಚನೆ ತಿಳಿಯದ,
ಕೆಲಸದ ಬಗ್ಗೆ ಯೋಚಿಸದ,
ಆಟದ ಬಗ್ಗೆ ಒಲವಿರುವ,

ನಿದ್ದೆ ಬಂದಾಗ ಮಲಗುವ,
ಎದ್ದಾಗ ಬದುಕುವ,
ನಾಳೆಯ ನಿರೀಕ್ಷೆಗಳಿಲ್ಲದ,
ಇಂದಿನ ಒತ್ತಡಗಳಿಲ್ಲದ,

ಆರೋಗ್ಯದ ಕಾಳಜಿ ಇಲ್ಲದ, ಅನಾರೋಗ್ಯದ ಭೀತಿ ಇಲ್ಲದ,
ಸಂಬಂಧಗಳ ರಗಳೆ ಇಲ್ಲದ,
ನಿಯಮಗಳ ಬಂಧವಿಲ್ಲದ,

ನಗು ಬಂದಾಗ ನಗುವ,
ಅಳು ಬಂದಾಗ ಅಳುವ,
ಮುಖವಾಡವಿಲ್ಲದ,
ಸಹಜ ಸ್ವಾಭಾವಿಕ……

ಆ ನನ್ನ ಬಾಲ್ಯವೇ ಮತ್ತೊಮ್ಮೆ ಬಾ,
ಆ ನಿನ್ನ ಮುಗ್ಧತೆ ನೆನಪಿಸು ಬಾ,

ಈಗ ನನ್ನ ದೇಹ ಮನಸ್ಸುಗಳು
ಕಲ್ಮಷಗೊಂಡಿವೆ,
ಈ ಯಾತನೆ ಸಹಿಸಲಾಗುತ್ತಿಲ್ಲ.
ನನ್ನರಿವೇ ನನ್ನನ್ನು ಕೊಲ್ಲುತ್ತಿದೆ.
ಅದನ್ನು ತಡೆಯಲಾದರೂ,,,,,

ಮತ್ತೊಮ್ಮೆ ಬಾ ನನ್ನ ಮುದ್ದು ಬಾಲ್ಯವೇ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

4 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

7 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

9 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

21 hours ago