Categories: ಲೇಖನ

ತುಂಬಾ ಗಾಬರಿಯಾಗುವುದು ಬೇಡ….. ಯೋಚಿಸುವ ಸಮಯ ನಮ್ಮದು…

ದೇಶದ ಚುನಾವಣೆ ಘೋಷಣೆಯಾಗಿದೆ. ಚುನಾವಣಾ ಆಯೋಗ ಅನೇಕ ನೀತಿ ನಿಯಮಗಳನ್ನು ಜಾರಿ ಮಾಡಿದೆ. ಅವುಗಳಲ್ಲಿ ಸೋಷಿಯಲ್ ಮೀಡಿಯಾಗಳ ಮೇಲಿನ ಕೆಲವು ನಿಯಂತ್ರಣಗಳು ಸೇರಿವೆ……

ಮೂಲಭೂತವಾಗಿ ಭಾರತ ಪ್ರಜಾಪ್ರಭುತ್ವ ವ್ಯವಸ್ಥೆಯ ಗಣರಾಜ್ಯ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲಿನ ಹಕ್ಕು.. .

ಕೇವಲ ಚುನಾವಣಾ ಸಮಯದಲ್ಲಿ ಮಾತ್ರವಲ್ಲ ಎಲ್ಲಾ ಕಾಲದಲ್ಲೂ, ಎಲ್ಲಾ ಸಂದರ್ಭದಲ್ಲಿಯೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಇನ್ನೊಬ್ಬರ ವೈಯಕ್ತಿಕ ನಿಂದನೆ, ಜಾತಿ ಧರ್ಮ ಭಾಷೆಗಳ ಅವಹೇಳನ, ಕೆಟ್ಟ ಪದಗಳ ಪ್ರಯೋಗ, ಅನೈತಿಕ ಚಟುವಟಿಕೆ, ಕಾನೂನು ಬಾಹಿರ ವ್ಯವಹಾರಗಳನ್ನು ನಿರ್ಬಂಧಿಸಲಾಗಿದೆ. ಇದೇನು ಹೊಸ ನಿಯಮವಲ್ಲ…….

ಚುನಾವಣಾ ಸಂದರ್ಭದಲ್ಲಿ ವಿಶೇಷವಾಗಿ ಕೆಲವು ಸೂಚನೆ ಕೊಡಲಾಗಿದೆ. ಅದರಲ್ಲಿ ಮುಖ್ಯವಾಗಿ….

ಸಾಮಾಜಿಕ ಜಾಲತಾಣಗಳಲ್ಲಿ ಅಭ್ಯರ್ಥಿ ಅಥವಾ ಪಕ್ಷದ ಪರ ಪ್ರಚಾರ ಮಾಡಬಾರದು. ಇದು ಸಂಪೂರ್ಣ ನಿಷೇಧವಲ್ಲ. ಪ್ರಚಾರ ಮಾಡಬೇಕಾದರೆ ಅನುಮತಿ ಪಡೆದಿರಬೇಕು. ಏಕೆಂದರೆ ಚುನಾವಣಾ ಖರ್ಚು ವೆಚ್ಚದ ಮೇಲೆ ಮಿತಿ ಇರುವುದರಿಂದ ಇಲ್ಲಿಯ ಪ್ರಚಾರದ ಲೆಕ್ಕ ಸಿಗುವುದಿಲ್ಲ ಎಂದು ಒಂದು ಆಲೋಚನೆ ಅಷ್ಟೆ. ಅನುಮತಿ ಪಡೆದು ಹಣದ ಲೆಕ್ಕ ತೋರಿಸಿ ಪ್ರಚಾರ ಮಾಡಬಹುದು. ಏಕೆಂದರೆ ಸಾಮಾನ್ಯ ಸಂಧರ್ಭದಲ್ಲಿ ಯಾವುದೇ ಮಾಧ್ಯಮಗಳ ಅಧೀಕೃತ ಪ್ರಚಾರವನ್ನು ತಡೆಯುವುದು ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ…..

ಮತ್ತೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹೆಚ್ಚಾಗಿ ಹರಿದಾಡುವುದರಿಂದ ಮತ್ತು ಅದಕ್ಕೆ ಒಂದು ನಿರ್ದಿಷ್ಟ ಜವಾಬ್ದಾರಿ ಮತ್ತು ಸತ್ಯದ ಅಧೀಕೃತ ಖಚಿತತೆಯ ಮಾನದಂಡಗಳು ಇಲ್ಲದಿರುವುದರಿಂದ, ಭಾರತದಂತಹ ಬೃಹತ್ ದೇಶದಲ್ಲಿ ಗಾಳಿ ಸುದ್ದಿಗಳು ಬಹುಬೇಗ ಹರಡುವುದು ಮತ್ತು ಜನರು ಅದನ್ನು ನಂಬುವ ಸಾಧ್ಯತೆ ಇರುವುದರಿಂದ ಅದರ ದುಷ್ಪರಿಣಾಮ ತಡೆಯಲು ಅನುಮತಿಯನ್ನು ಕಡ್ಡಾಯ ಗೊಳಿಸಲಾಗಿದೆ…..

ಇದನ್ನೇ ಕೆಲವು ಗೆಳೆಯರು ತಪ್ಪಾಗಿ ಭಾವಿಸಿ ಕಳವಳಗೊಂಡಿದ್ದಾರೆ. ಭಾರತದ ಪ್ರಜೆಗಳೆಲ್ಲ ಕ್ರಿಮಿನಲ್ ಗಳಲ್ಲ. ಪ್ರಜಾಪ್ರಭುತ್ವದ ಮೂಲ ಗಟ್ಟಿತನ ಉಳಿದಿರುವುದೇ ಅದರ ಭಿನ್ನ ಧ್ವನಿಗಳಿಂದಾಗಿ. ಇದೇನು ಕಮ್ಯುನಿಸ್ಟ್ ಅಥವಾ ಸರ್ವಾಧಿಕಾರಿ ದೇಶವಲ್ಲ…..

ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗೆ ಇರುವಷ್ಟು ಸ್ವಾತಂತ್ರ್ಯ ಸೋಷಿಯಲ್ ಮೀಡಿಯಾಗಳಿಗೂ ಇದೆ. ಅದೇರೀತಿ ಕಾನೂನು ಬಾಹಿರ ವಿಷಯ ಪ್ರಕಟಿಸಿದರೆ ಶಿಕ್ಷೆಗೆ ಗುರಿ ಮಾಡುವ ಅಧಿಕಾರವೂ ಆಡಳಿತಕ್ಕೆ ಇದೆ……‌

ಸೋಷಿಯಲ್ ಮೀಡಿಯಾ ಇಂದು ಒಂದು ಪ್ರಬಲ ಮಾಧ್ಯಮವಾಗಿ ಬೆಳೆದಿದೆ. ಭಾರತದ ಶಾಂತಿ ಸಾಮರಸ್ಯ ಅಭಿವೃದ್ಧಿ ಮತ್ತು ವೈವಿಧ್ಯತೆಯನ್ನು ಉಳಿಸಿಕೊಳ್ಳಲು ಒಂದು ಜನಾಭಿಪ್ರಾಯ ಮೂಡಿಸುವುದು ಅವಶ್ಯವಲ್ಲವೆ‌‌……

ಅಧಿಕಾರಿಗಳು, ರಾಜಕೀಯ ಪಕ್ಷಗಳು, ಅತ್ಯಂತ ನೀಚ ಭ್ರಷ್ಟಾಚಾರಗಳಲ್ಲಿ ತೊಡಗಿ, ಅಕ್ರಮಗಳ ಮುಖಾಂತರ ಚುನಾವಣೆ ಗೆದ್ದು ಬಡವರ ರಕ್ತ ಹೀರುತ್ತಿರುವಾಗ ನಾವು ಕೈಕಟ್ಟಿ, ಬಾಯಿ ಮುಚ್ಚಿ ಕುಳಿತುಕೊಳ್ಳಬೇಕೆ……

ಕನಿಷ್ಠ ಒಂದು ಒಳ್ಳೆಯ ಆಡಳಿತಾತ್ಮಕ ವ್ಯವಸ್ಥೆ ರೂಪಿಸಲು, ಜನರ ಮೇಲೆ ಸಾಮೂಹಿಕ ಪರಿಣಾಮ ಬೀರಿ ಜನಾಭಿಪ್ರಾಯ ರೂಪಿಸಲು ಸಣ್ಣ ಮಟ್ಟದ ಪ್ರಯತ್ನ ಮಾಡಬಾರದೆ……

ಹೌದು, ಕೆಲವು ಉಡಾಫೆ ಮನೋಭಾವದ ಜನಗಳು ಯಾವುದೋ ವ್ಯಕ್ತಿ ಅಥವಾ ಪಕ್ಷ ಅಥವಾ ಜಾತಿ ಅಥವಾ ಧರ್ಮ ಅಥವಾ ಹಣಕ್ಕೆ ತಮ್ಮನ್ನು ಮಾರಿಕೊಂಡು ಅಸಭ್ಯ ಭಾಷೆಯಿಂದ ಇತರರನ್ನು ಕೆಟ್ಟ ಕೊಳಕ ಭಾಷೆಯಲ್ಲಿ ನಿಂದಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವುದನ್ನು ನೋಡುತ್ತಿದ್ದೇವೆ. ಇದು ಅಪರಾಧ……

ಆದರೆ ಇಂತಹ ಅಭ್ಯರ್ಥಿ ಉತ್ತಮ, ಇಂತಹ ಪಕ್ಷ ಪರವಾಗಿಲ್ಲ ಅಥವಾ ‌ಇದು ಯಾವುದೂ ಸರಿ ಇಲ್ಲ ಬೇರೆ ವ್ಯವಸ್ಥೆಯ ಬಗ್ಗೆ ಪರಿಶೀಲಿಸೋಣ ಎಂಬ ಅಭಿಪ್ರಾಯ ವ್ಯಕ್ತಪಡಿಸಲೂ ಸಾಧ್ಯವಿಲ್ಲ ಎಂದಾದರೆ ಅದು ಪ್ರಜಾಪ್ರಭುತ್ವ ನಾಶದ ಲಕ್ಷಣ ಎಂದೇ ಭಾವಿಸಬೇಕಾಗುತ್ತದೆ…….

ಕೆಟ್ಟದ್ದನ್ನು ನಿಯಂತ್ರಿಸುವ ಭರದಲ್ಲಿ ಒಳ್ಳೆಯವರನ್ನು ಮೂಕರಾಗಿಸುವುದು ದುರಂತ. ಇದರ ಲಾಭ ಪಡೆಯುವ ದುಷ್ಟರು ನಮ್ಮನ್ನು ಸದಾಕಾಲವು ಶೋಷಿಸುತ್ತಲೇ ಇರುತ್ತಾರೆ. ಬಂಧನದ ಭೀತಿ ಸೃಷ್ಟಿಸಿ ನಮ್ಮ ಧ್ವನಿ ಅಡಗಿಸುತ್ತಾರೆ……

ನಾವು ಎಚ್ಚೆತ್ತುಕೊಳ್ಳಬೇಕಿದೆ. ಕೊಲೆಗಡುಕರು, ಭ್ರಷ್ಟರು, ಮಾಫಿಯಾದವರು, ರೌಡಿಗಳು, ಖದೀಮರು ಬಾಯಿಗೆ ಬಂದಂತೆ ರಾಜಾರೋಷವಾಗಿ ಮಾತನಾಡುವಾಗ ದೇಶದ ಹಿತದೃಷ್ಟಿಯಿಂದ ಒಳ್ಳೆಯ ಮಾತನಾಡುವ ನಾವು ಹೆದರಬೇಕೆ ?……

ಯೋಚಿಸುವ ಸಮಯ ನಮ್ಮದು……ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ.

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

3 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

5 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

8 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

22 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago