Categories: ಲೇಖನ

ತುಂಬಾ ಗಾಬರಿಯಾಗುವುದು ಬೇಡ….. ಯೋಚಿಸುವ ಸಮಯ ನಮ್ಮದು…

ದೇಶದ ಚುನಾವಣೆ ಘೋಷಣೆಯಾಗಿದೆ. ಚುನಾವಣಾ ಆಯೋಗ ಅನೇಕ ನೀತಿ ನಿಯಮಗಳನ್ನು ಜಾರಿ ಮಾಡಿದೆ. ಅವುಗಳಲ್ಲಿ ಸೋಷಿಯಲ್ ಮೀಡಿಯಾಗಳ ಮೇಲಿನ ಕೆಲವು ನಿಯಂತ್ರಣಗಳು ಸೇರಿವೆ……

ಮೂಲಭೂತವಾಗಿ ಭಾರತ ಪ್ರಜಾಪ್ರಭುತ್ವ ವ್ಯವಸ್ಥೆಯ ಗಣರಾಜ್ಯ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲಿನ ಹಕ್ಕು.. .

ಕೇವಲ ಚುನಾವಣಾ ಸಮಯದಲ್ಲಿ ಮಾತ್ರವಲ್ಲ ಎಲ್ಲಾ ಕಾಲದಲ್ಲೂ, ಎಲ್ಲಾ ಸಂದರ್ಭದಲ್ಲಿಯೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಇನ್ನೊಬ್ಬರ ವೈಯಕ್ತಿಕ ನಿಂದನೆ, ಜಾತಿ ಧರ್ಮ ಭಾಷೆಗಳ ಅವಹೇಳನ, ಕೆಟ್ಟ ಪದಗಳ ಪ್ರಯೋಗ, ಅನೈತಿಕ ಚಟುವಟಿಕೆ, ಕಾನೂನು ಬಾಹಿರ ವ್ಯವಹಾರಗಳನ್ನು ನಿರ್ಬಂಧಿಸಲಾಗಿದೆ. ಇದೇನು ಹೊಸ ನಿಯಮವಲ್ಲ…….

ಚುನಾವಣಾ ಸಂದರ್ಭದಲ್ಲಿ ವಿಶೇಷವಾಗಿ ಕೆಲವು ಸೂಚನೆ ಕೊಡಲಾಗಿದೆ. ಅದರಲ್ಲಿ ಮುಖ್ಯವಾಗಿ….

ಸಾಮಾಜಿಕ ಜಾಲತಾಣಗಳಲ್ಲಿ ಅಭ್ಯರ್ಥಿ ಅಥವಾ ಪಕ್ಷದ ಪರ ಪ್ರಚಾರ ಮಾಡಬಾರದು. ಇದು ಸಂಪೂರ್ಣ ನಿಷೇಧವಲ್ಲ. ಪ್ರಚಾರ ಮಾಡಬೇಕಾದರೆ ಅನುಮತಿ ಪಡೆದಿರಬೇಕು. ಏಕೆಂದರೆ ಚುನಾವಣಾ ಖರ್ಚು ವೆಚ್ಚದ ಮೇಲೆ ಮಿತಿ ಇರುವುದರಿಂದ ಇಲ್ಲಿಯ ಪ್ರಚಾರದ ಲೆಕ್ಕ ಸಿಗುವುದಿಲ್ಲ ಎಂದು ಒಂದು ಆಲೋಚನೆ ಅಷ್ಟೆ. ಅನುಮತಿ ಪಡೆದು ಹಣದ ಲೆಕ್ಕ ತೋರಿಸಿ ಪ್ರಚಾರ ಮಾಡಬಹುದು. ಏಕೆಂದರೆ ಸಾಮಾನ್ಯ ಸಂಧರ್ಭದಲ್ಲಿ ಯಾವುದೇ ಮಾಧ್ಯಮಗಳ ಅಧೀಕೃತ ಪ್ರಚಾರವನ್ನು ತಡೆಯುವುದು ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ…..

ಮತ್ತೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹೆಚ್ಚಾಗಿ ಹರಿದಾಡುವುದರಿಂದ ಮತ್ತು ಅದಕ್ಕೆ ಒಂದು ನಿರ್ದಿಷ್ಟ ಜವಾಬ್ದಾರಿ ಮತ್ತು ಸತ್ಯದ ಅಧೀಕೃತ ಖಚಿತತೆಯ ಮಾನದಂಡಗಳು ಇಲ್ಲದಿರುವುದರಿಂದ, ಭಾರತದಂತಹ ಬೃಹತ್ ದೇಶದಲ್ಲಿ ಗಾಳಿ ಸುದ್ದಿಗಳು ಬಹುಬೇಗ ಹರಡುವುದು ಮತ್ತು ಜನರು ಅದನ್ನು ನಂಬುವ ಸಾಧ್ಯತೆ ಇರುವುದರಿಂದ ಅದರ ದುಷ್ಪರಿಣಾಮ ತಡೆಯಲು ಅನುಮತಿಯನ್ನು ಕಡ್ಡಾಯ ಗೊಳಿಸಲಾಗಿದೆ…..

ಇದನ್ನೇ ಕೆಲವು ಗೆಳೆಯರು ತಪ್ಪಾಗಿ ಭಾವಿಸಿ ಕಳವಳಗೊಂಡಿದ್ದಾರೆ. ಭಾರತದ ಪ್ರಜೆಗಳೆಲ್ಲ ಕ್ರಿಮಿನಲ್ ಗಳಲ್ಲ. ಪ್ರಜಾಪ್ರಭುತ್ವದ ಮೂಲ ಗಟ್ಟಿತನ ಉಳಿದಿರುವುದೇ ಅದರ ಭಿನ್ನ ಧ್ವನಿಗಳಿಂದಾಗಿ. ಇದೇನು ಕಮ್ಯುನಿಸ್ಟ್ ಅಥವಾ ಸರ್ವಾಧಿಕಾರಿ ದೇಶವಲ್ಲ…..

ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗೆ ಇರುವಷ್ಟು ಸ್ವಾತಂತ್ರ್ಯ ಸೋಷಿಯಲ್ ಮೀಡಿಯಾಗಳಿಗೂ ಇದೆ. ಅದೇರೀತಿ ಕಾನೂನು ಬಾಹಿರ ವಿಷಯ ಪ್ರಕಟಿಸಿದರೆ ಶಿಕ್ಷೆಗೆ ಗುರಿ ಮಾಡುವ ಅಧಿಕಾರವೂ ಆಡಳಿತಕ್ಕೆ ಇದೆ……‌

ಸೋಷಿಯಲ್ ಮೀಡಿಯಾ ಇಂದು ಒಂದು ಪ್ರಬಲ ಮಾಧ್ಯಮವಾಗಿ ಬೆಳೆದಿದೆ. ಭಾರತದ ಶಾಂತಿ ಸಾಮರಸ್ಯ ಅಭಿವೃದ್ಧಿ ಮತ್ತು ವೈವಿಧ್ಯತೆಯನ್ನು ಉಳಿಸಿಕೊಳ್ಳಲು ಒಂದು ಜನಾಭಿಪ್ರಾಯ ಮೂಡಿಸುವುದು ಅವಶ್ಯವಲ್ಲವೆ‌‌……

ಅಧಿಕಾರಿಗಳು, ರಾಜಕೀಯ ಪಕ್ಷಗಳು, ಅತ್ಯಂತ ನೀಚ ಭ್ರಷ್ಟಾಚಾರಗಳಲ್ಲಿ ತೊಡಗಿ, ಅಕ್ರಮಗಳ ಮುಖಾಂತರ ಚುನಾವಣೆ ಗೆದ್ದು ಬಡವರ ರಕ್ತ ಹೀರುತ್ತಿರುವಾಗ ನಾವು ಕೈಕಟ್ಟಿ, ಬಾಯಿ ಮುಚ್ಚಿ ಕುಳಿತುಕೊಳ್ಳಬೇಕೆ……

ಕನಿಷ್ಠ ಒಂದು ಒಳ್ಳೆಯ ಆಡಳಿತಾತ್ಮಕ ವ್ಯವಸ್ಥೆ ರೂಪಿಸಲು, ಜನರ ಮೇಲೆ ಸಾಮೂಹಿಕ ಪರಿಣಾಮ ಬೀರಿ ಜನಾಭಿಪ್ರಾಯ ರೂಪಿಸಲು ಸಣ್ಣ ಮಟ್ಟದ ಪ್ರಯತ್ನ ಮಾಡಬಾರದೆ……

ಹೌದು, ಕೆಲವು ಉಡಾಫೆ ಮನೋಭಾವದ ಜನಗಳು ಯಾವುದೋ ವ್ಯಕ್ತಿ ಅಥವಾ ಪಕ್ಷ ಅಥವಾ ಜಾತಿ ಅಥವಾ ಧರ್ಮ ಅಥವಾ ಹಣಕ್ಕೆ ತಮ್ಮನ್ನು ಮಾರಿಕೊಂಡು ಅಸಭ್ಯ ಭಾಷೆಯಿಂದ ಇತರರನ್ನು ಕೆಟ್ಟ ಕೊಳಕ ಭಾಷೆಯಲ್ಲಿ ನಿಂದಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವುದನ್ನು ನೋಡುತ್ತಿದ್ದೇವೆ. ಇದು ಅಪರಾಧ……

ಆದರೆ ಇಂತಹ ಅಭ್ಯರ್ಥಿ ಉತ್ತಮ, ಇಂತಹ ಪಕ್ಷ ಪರವಾಗಿಲ್ಲ ಅಥವಾ ‌ಇದು ಯಾವುದೂ ಸರಿ ಇಲ್ಲ ಬೇರೆ ವ್ಯವಸ್ಥೆಯ ಬಗ್ಗೆ ಪರಿಶೀಲಿಸೋಣ ಎಂಬ ಅಭಿಪ್ರಾಯ ವ್ಯಕ್ತಪಡಿಸಲೂ ಸಾಧ್ಯವಿಲ್ಲ ಎಂದಾದರೆ ಅದು ಪ್ರಜಾಪ್ರಭುತ್ವ ನಾಶದ ಲಕ್ಷಣ ಎಂದೇ ಭಾವಿಸಬೇಕಾಗುತ್ತದೆ…….

ಕೆಟ್ಟದ್ದನ್ನು ನಿಯಂತ್ರಿಸುವ ಭರದಲ್ಲಿ ಒಳ್ಳೆಯವರನ್ನು ಮೂಕರಾಗಿಸುವುದು ದುರಂತ. ಇದರ ಲಾಭ ಪಡೆಯುವ ದುಷ್ಟರು ನಮ್ಮನ್ನು ಸದಾಕಾಲವು ಶೋಷಿಸುತ್ತಲೇ ಇರುತ್ತಾರೆ. ಬಂಧನದ ಭೀತಿ ಸೃಷ್ಟಿಸಿ ನಮ್ಮ ಧ್ವನಿ ಅಡಗಿಸುತ್ತಾರೆ……

ನಾವು ಎಚ್ಚೆತ್ತುಕೊಳ್ಳಬೇಕಿದೆ. ಕೊಲೆಗಡುಕರು, ಭ್ರಷ್ಟರು, ಮಾಫಿಯಾದವರು, ರೌಡಿಗಳು, ಖದೀಮರು ಬಾಯಿಗೆ ಬಂದಂತೆ ರಾಜಾರೋಷವಾಗಿ ಮಾತನಾಡುವಾಗ ದೇಶದ ಹಿತದೃಷ್ಟಿಯಿಂದ ಒಳ್ಳೆಯ ಮಾತನಾಡುವ ನಾವು ಹೆದರಬೇಕೆ ?……

ಯೋಚಿಸುವ ಸಮಯ ನಮ್ಮದು……ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ.

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

16 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago