ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಕಾರ್ಯನಿರ್ವಹಿಸಿ ತಾಲೂಕಿನ ಮನೆ ಮಾತಾಗಿದ್ದ ತಹಶೀಲ್ದಾರ್ ನಾಹೀದಾ ಜಮ ಜಮ್ ರವರು ಜ.23ರಂದು ತುಮಕೂರು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಅಧಿಕಾರ ವಹಿಸಿಕೊಂಡರು.ಈ ಮೂಲಕ ತುಮಕೂರು ವಿಶ್ವವಿದ್ಯಾಲಯದ ಅತಿ ಕಿರಿಯ ವಯಸ್ಸಿನ ಮತ್ತು ಮೊದಲ ಮಹಿಳಾ ಕುಲ ಸಚಿವರು ಎಂಬ ಕೀರ್ತಿಗೆ ಪಾತ್ರರಾದರು.
ನಹಿದಾ ಜಮ ಜಮ್ ನಾಗರಿಕ ಆಡಳಿತ ಸೇವೆಗೆ ಸೇರಿದ ನಂತರ ಮೊದಲ ಬಾರಿಗೆ 2019ರಲ್ಲಿ ಶಿರಾ ತಾಲೂಕಿನ ತಹಶೀಲ್ದಾರ್ ಆಗಿ ಕೆಲಸ ನಿರ್ವಹಿಸಿದ್ದರು. ಈ ವೇಳೆ 2020ರಲ್ಲಿ ಕೋವಿಡ್ ಆವರಿಸಿದ ಸಂದರ್ಭದಲ್ಲಿ ಗರ್ಭಿಣಿ ಎಂಬುದನ್ನು ಮರೆತು ಶಿರಾದಲ್ಲಿ ಸಾಮಾನ್ಯ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಗಮನ ಸೆಳೆದಿದ್ದರು. ಕೋವಿಡ್ ತೀವ್ರ ಸ್ವರೂಪದಲ್ಲಿ ಹರಡುವ ವೇಳೆ ಗರ್ಭಿಣಿಯಾಗಿದ್ದರೂ ಮನೆಯಲ್ಲಿ ಕೂರದೇ ಇಡೀ ತಾಲ್ಲೂಕನ್ನು ಸುತ್ತುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದರು. ಇದರಿಂದಾಗಿ ಜನ ಹಾಗೂ ಇಲಾಖೆ ಮೆಚ್ಚುಗೆಗೂ ಪಾತ್ರರಾಗಿದ್ದರು.
2021ರ ಆಗಸ್ಟ್ ತಿಂಗಳಲ್ಲಿ ಕೊರಟಗೆರೆ ತಾಲೂಕಿಗೆ ವರ್ಗಾವಣೆಯಾಗಿ ಬಂದ ನಂತರ ಜನರ ನಾಡಿಮಿಡಿತ ಅರಿತು ಸಮಸ್ಯೆಗಳನ್ನು ಪರಿಹರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಜಟಿಲವಾದ ಸಮಸ್ಯೆಯಾಗಿದ್ದ ಬಗರ್ಹುಕುಂ ಸಾಗುವಳಿ ಹಕ್ಕುಪತ್ರ ನೀಡುವಲ್ಲಿ ಕಠಿಣ ಕ್ರಮ ಕೈಗೊಂಡು ರೈತರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಈಗ ತುಮಕೂರು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಯಾವ ರೀತಿ ಅಧಿಕಾರ ಹಾಗೂ ಇಲ್ಲಿನ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…