ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಕಾರ್ಯನಿರ್ವಹಿಸಿ ತಾಲೂಕಿನ ಮನೆ ಮಾತಾಗಿದ್ದ ತಹಶೀಲ್ದಾರ್ ನಾಹೀದಾ ಜಮ ಜಮ್ ರವರು ಜ.23ರಂದು ತುಮಕೂರು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಅಧಿಕಾರ ವಹಿಸಿಕೊಂಡರು.ಈ ಮೂಲಕ ತುಮಕೂರು ವಿಶ್ವವಿದ್ಯಾಲಯದ ಅತಿ ಕಿರಿಯ ವಯಸ್ಸಿನ ಮತ್ತು ಮೊದಲ ಮಹಿಳಾ ಕುಲ ಸಚಿವರು ಎಂಬ ಕೀರ್ತಿಗೆ ಪಾತ್ರರಾದರು.
ನಹಿದಾ ಜಮ ಜಮ್ ನಾಗರಿಕ ಆಡಳಿತ ಸೇವೆಗೆ ಸೇರಿದ ನಂತರ ಮೊದಲ ಬಾರಿಗೆ 2019ರಲ್ಲಿ ಶಿರಾ ತಾಲೂಕಿನ ತಹಶೀಲ್ದಾರ್ ಆಗಿ ಕೆಲಸ ನಿರ್ವಹಿಸಿದ್ದರು. ಈ ವೇಳೆ 2020ರಲ್ಲಿ ಕೋವಿಡ್ ಆವರಿಸಿದ ಸಂದರ್ಭದಲ್ಲಿ ಗರ್ಭಿಣಿ ಎಂಬುದನ್ನು ಮರೆತು ಶಿರಾದಲ್ಲಿ ಸಾಮಾನ್ಯ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಗಮನ ಸೆಳೆದಿದ್ದರು. ಕೋವಿಡ್ ತೀವ್ರ ಸ್ವರೂಪದಲ್ಲಿ ಹರಡುವ ವೇಳೆ ಗರ್ಭಿಣಿಯಾಗಿದ್ದರೂ ಮನೆಯಲ್ಲಿ ಕೂರದೇ ಇಡೀ ತಾಲ್ಲೂಕನ್ನು ಸುತ್ತುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದರು. ಇದರಿಂದಾಗಿ ಜನ ಹಾಗೂ ಇಲಾಖೆ ಮೆಚ್ಚುಗೆಗೂ ಪಾತ್ರರಾಗಿದ್ದರು.
2021ರ ಆಗಸ್ಟ್ ತಿಂಗಳಲ್ಲಿ ಕೊರಟಗೆರೆ ತಾಲೂಕಿಗೆ ವರ್ಗಾವಣೆಯಾಗಿ ಬಂದ ನಂತರ ಜನರ ನಾಡಿಮಿಡಿತ ಅರಿತು ಸಮಸ್ಯೆಗಳನ್ನು ಪರಿಹರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಜಟಿಲವಾದ ಸಮಸ್ಯೆಯಾಗಿದ್ದ ಬಗರ್ಹುಕುಂ ಸಾಗುವಳಿ ಹಕ್ಕುಪತ್ರ ನೀಡುವಲ್ಲಿ ಕಠಿಣ ಕ್ರಮ ಕೈಗೊಂಡು ರೈತರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಈಗ ತುಮಕೂರು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಯಾವ ರೀತಿ ಅಧಿಕಾರ ಹಾಗೂ ಇಲ್ಲಿನ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…