ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಕಾರ್ಯನಿರ್ವಹಿಸಿ ತಾಲೂಕಿನ ಮನೆ ಮಾತಾಗಿದ್ದ ತಹಶೀಲ್ದಾರ್ ನಾಹೀದಾ ಜಮ ಜಮ್ ರವರು ಜ.23ರಂದು ತುಮಕೂರು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಅಧಿಕಾರ ವಹಿಸಿಕೊಂಡರು.ಈ ಮೂಲಕ ತುಮಕೂರು ವಿಶ್ವವಿದ್ಯಾಲಯದ ಅತಿ ಕಿರಿಯ ವಯಸ್ಸಿನ ಮತ್ತು ಮೊದಲ ಮಹಿಳಾ ಕುಲ ಸಚಿವರು ಎಂಬ ಕೀರ್ತಿಗೆ ಪಾತ್ರರಾದರು.
ನಹಿದಾ ಜಮ ಜಮ್ ನಾಗರಿಕ ಆಡಳಿತ ಸೇವೆಗೆ ಸೇರಿದ ನಂತರ ಮೊದಲ ಬಾರಿಗೆ 2019ರಲ್ಲಿ ಶಿರಾ ತಾಲೂಕಿನ ತಹಶೀಲ್ದಾರ್ ಆಗಿ ಕೆಲಸ ನಿರ್ವಹಿಸಿದ್ದರು. ಈ ವೇಳೆ 2020ರಲ್ಲಿ ಕೋವಿಡ್ ಆವರಿಸಿದ ಸಂದರ್ಭದಲ್ಲಿ ಗರ್ಭಿಣಿ ಎಂಬುದನ್ನು ಮರೆತು ಶಿರಾದಲ್ಲಿ ಸಾಮಾನ್ಯ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಗಮನ ಸೆಳೆದಿದ್ದರು. ಕೋವಿಡ್ ತೀವ್ರ ಸ್ವರೂಪದಲ್ಲಿ ಹರಡುವ ವೇಳೆ ಗರ್ಭಿಣಿಯಾಗಿದ್ದರೂ ಮನೆಯಲ್ಲಿ ಕೂರದೇ ಇಡೀ ತಾಲ್ಲೂಕನ್ನು ಸುತ್ತುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದರು. ಇದರಿಂದಾಗಿ ಜನ ಹಾಗೂ ಇಲಾಖೆ ಮೆಚ್ಚುಗೆಗೂ ಪಾತ್ರರಾಗಿದ್ದರು.
2021ರ ಆಗಸ್ಟ್ ತಿಂಗಳಲ್ಲಿ ಕೊರಟಗೆರೆ ತಾಲೂಕಿಗೆ ವರ್ಗಾವಣೆಯಾಗಿ ಬಂದ ನಂತರ ಜನರ ನಾಡಿಮಿಡಿತ ಅರಿತು ಸಮಸ್ಯೆಗಳನ್ನು ಪರಿಹರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಜಟಿಲವಾದ ಸಮಸ್ಯೆಯಾಗಿದ್ದ ಬಗರ್ಹುಕುಂ ಸಾಗುವಳಿ ಹಕ್ಕುಪತ್ರ ನೀಡುವಲ್ಲಿ ಕಠಿಣ ಕ್ರಮ ಕೈಗೊಂಡು ರೈತರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಈಗ ತುಮಕೂರು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಯಾವ ರೀತಿ ಅಧಿಕಾರ ಹಾಗೂ ಇಲ್ಲಿನ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
There are many benefits to playing at real money casino sites. Whether you are looking…
ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…
ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…
ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…
ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…