ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಕಾರ್ಯನಿರ್ವಹಿಸಿ ತಾಲೂಕಿನ ಮನೆ ಮಾತಾಗಿದ್ದ ತಹಶೀಲ್ದಾರ್ ನಾಹೀದಾ ಜಮ ಜಮ್ ರವರು ಜ.23ರಂದು ತುಮಕೂರು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಅಧಿಕಾರ ವಹಿಸಿಕೊಂಡರು.ಈ ಮೂಲಕ ತುಮಕೂರು ವಿಶ್ವವಿದ್ಯಾಲಯದ ಅತಿ ಕಿರಿಯ ವಯಸ್ಸಿನ ಮತ್ತು ಮೊದಲ ಮಹಿಳಾ ಕುಲ ಸಚಿವರು ಎಂಬ ಕೀರ್ತಿಗೆ ಪಾತ್ರರಾದರು.
ನಹಿದಾ ಜಮ ಜಮ್ ನಾಗರಿಕ ಆಡಳಿತ ಸೇವೆಗೆ ಸೇರಿದ ನಂತರ ಮೊದಲ ಬಾರಿಗೆ 2019ರಲ್ಲಿ ಶಿರಾ ತಾಲೂಕಿನ ತಹಶೀಲ್ದಾರ್ ಆಗಿ ಕೆಲಸ ನಿರ್ವಹಿಸಿದ್ದರು. ಈ ವೇಳೆ 2020ರಲ್ಲಿ ಕೋವಿಡ್ ಆವರಿಸಿದ ಸಂದರ್ಭದಲ್ಲಿ ಗರ್ಭಿಣಿ ಎಂಬುದನ್ನು ಮರೆತು ಶಿರಾದಲ್ಲಿ ಸಾಮಾನ್ಯ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಗಮನ ಸೆಳೆದಿದ್ದರು. ಕೋವಿಡ್ ತೀವ್ರ ಸ್ವರೂಪದಲ್ಲಿ ಹರಡುವ ವೇಳೆ ಗರ್ಭಿಣಿಯಾಗಿದ್ದರೂ ಮನೆಯಲ್ಲಿ ಕೂರದೇ ಇಡೀ ತಾಲ್ಲೂಕನ್ನು ಸುತ್ತುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದರು. ಇದರಿಂದಾಗಿ ಜನ ಹಾಗೂ ಇಲಾಖೆ ಮೆಚ್ಚುಗೆಗೂ ಪಾತ್ರರಾಗಿದ್ದರು.
2021ರ ಆಗಸ್ಟ್ ತಿಂಗಳಲ್ಲಿ ಕೊರಟಗೆರೆ ತಾಲೂಕಿಗೆ ವರ್ಗಾವಣೆಯಾಗಿ ಬಂದ ನಂತರ ಜನರ ನಾಡಿಮಿಡಿತ ಅರಿತು ಸಮಸ್ಯೆಗಳನ್ನು ಪರಿಹರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಜಟಿಲವಾದ ಸಮಸ್ಯೆಯಾಗಿದ್ದ ಬಗರ್ಹುಕುಂ ಸಾಗುವಳಿ ಹಕ್ಕುಪತ್ರ ನೀಡುವಲ್ಲಿ ಕಠಿಣ ಕ್ರಮ ಕೈಗೊಂಡು ರೈತರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಈಗ ತುಮಕೂರು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಯಾವ ರೀತಿ ಅಧಿಕಾರ ಹಾಗೂ ಇಲ್ಲಿನ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…