Categories: ತುಮಕೂರು

ತುಮಕೂರು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಾಹೀದಾ ಜಮ ಜಮ್

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಕಾರ್ಯನಿರ್ವಹಿಸಿ ತಾಲೂಕಿನ ಮನೆ ಮಾತಾಗಿದ್ದ ತಹಶೀಲ್ದಾರ್ ನಾಹೀದಾ ಜಮ ಜಮ್ ರವರು ಜ.23ರಂದು ತುಮಕೂರು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಅಧಿಕಾರ ವಹಿಸಿಕೊಂಡರು.ಈ ಮೂಲಕ ತುಮಕೂರು ವಿಶ್ವವಿದ್ಯಾಲಯದ ಅತಿ ಕಿರಿಯ ವಯಸ್ಸಿನ ಮತ್ತು ಮೊದಲ ಮಹಿಳಾ ಕುಲ ಸಚಿವರು ಎಂಬ ಕೀರ್ತಿಗೆ ಪಾತ್ರರಾದರು.

ನಹಿದಾ ಜಮ ಜಮ್ ನಾಗರಿಕ ಆಡಳಿತ ಸೇವೆಗೆ ಸೇರಿದ ನಂತರ ಮೊದಲ ಬಾರಿಗೆ 2019ರಲ್ಲಿ ಶಿರಾ ತಾಲೂಕಿನ ತಹಶೀಲ್ದಾರ್ ಆಗಿ ಕೆಲಸ ನಿರ್ವಹಿಸಿದ್ದರು. ಈ ವೇಳೆ 2020ರಲ್ಲಿ ಕೋವಿಡ್ ಆವರಿಸಿದ ಸಂದರ್ಭದಲ್ಲಿ ಗರ್ಭಿಣಿ ಎಂಬುದನ್ನು ಮರೆತು ಶಿರಾದಲ್ಲಿ ಸಾಮಾನ್ಯ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಗಮನ ಸೆಳೆದಿದ್ದರು. ಕೋವಿಡ್ ತೀವ್ರ ಸ್ವರೂಪದಲ್ಲಿ ಹರಡುವ ವೇಳೆ ಗರ್ಭಿಣಿಯಾಗಿದ್ದರೂ ಮನೆಯಲ್ಲಿ ಕೂರದೇ ಇಡೀ ತಾಲ್ಲೂಕನ್ನು ಸುತ್ತುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದರು. ಇದರಿಂದಾಗಿ ಜನ ಹಾಗೂ ಇಲಾಖೆ ಮೆಚ್ಚುಗೆಗೂ ಪಾತ್ರರಾಗಿದ್ದರು.

2021ರ ಆಗಸ್ಟ್ ತಿಂಗಳಲ್ಲಿ ಕೊರಟಗೆರೆ ತಾಲೂಕಿಗೆ ವರ್ಗಾವಣೆಯಾಗಿ ಬಂದ ನಂತರ ಜನರ ನಾಡಿಮಿಡಿತ ಅರಿತು ಸಮಸ್ಯೆಗಳನ್ನು ಪರಿಹರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಜಟಿಲವಾದ ಸಮಸ್ಯೆಯಾಗಿದ್ದ ಬಗರ್‌ಹುಕುಂ ಸಾಗುವಳಿ ಹಕ್ಕುಪತ್ರ ನೀಡುವಲ್ಲಿ ಕಠಿಣ ಕ್ರಮ ಕೈಗೊಂಡು ರೈತರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಈಗ ತುಮಕೂರು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಯಾವ ರೀತಿ ಅಧಿಕಾರ ಹಾಗೂ ಇಲ್ಲಿನ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

7 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

16 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

20 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago