Categories: ಕೋಲಾರ

ತುರಾಂಡಹಳ್ಳಿ ಡೇರಿಗೆ 4.86 ಲಕ್ಷ ನಿವ್ವಳ ಲಾಭ

ಕೋಲಾರ: ತಾಲ್ಲೂಕಿನ ಸುಗಟೂರು ಹೋಬಳಿಯ ತುರಾಂಡಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಸಭೆಯು ಅಧ್ಯಕ್ಷ ಟಿ.ಎಂ ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆಯಿತು,

ಈ ಸಂದರ್ಭದಲ್ಲಿ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಸಂಘದ ಆಡಳಿತ ಮಂಡಳಿ ಹಾಗೂ ಹಾಲು ಉತ್ಪಾದಕರ ಸಹಕಾರದಿಂದ 2023-24ನೇ ಸಾಲಿನಲ್ಲಿ 8.46 ಲಕ್ಷದಷ್ಟು ಲಾಭಾಂಶ ಬಂದಿದ್ದು, ನಿವ್ವಳ ಲಾಭವು 4.86 ಲಕ್ಷ ಬಂದಿದೆ ಸುಮಾರು 15 ವರ್ಷದ ಹಿಂದೆ ಪ್ರಾರಂಭವಾದ ಡೇರಿಗೆ ಸ್ವಂತ ಕಟ್ಟಡವಿಲ್ಲವಾಗಿದ್ದು ಬಾಡಿಗೆ ಕಟ್ಟಡದಲ್ಲಿ ಇದ್ದು ಮುಂದೆ ಸ್ವಂತ ಕಟ್ಟಡವನ್ನು ನಿರ್ಮಿಸಲು ಸಂಘದ ನಿರ್ದೇಶಕರು, ಹಾಲು ಉತ್ಪಾದಕರು ಹಾಗೂ ಗ್ರಾಮಸ್ಥರ ಸಹಕಾರವು ಮುಖ್ಯವಾಗಿದೆ ಎಂದರು.

ಸಹಕಾರಿ ವ್ಯವಸ್ಥೆಯಲ್ಲಿ ರಾಜಕಾರಣವನ್ನು ತರದೇ ಪಕ್ಷಾತೀತವಾಗಿ ಅಭಿವೃದ್ಧಿಗೆ ಸಹಕರಿಸಬೇಕು ಹಾಲು ಡೇರಿಗಳು ಅಭಿವೃದ್ಧಿಯಾಗ ಬೇಕಾದರೆ ರೈತರು ಉತ್ತಮ ಕೊಬ್ಬಿನ ಅಂಶವಿರುವ ಹಾಲು ಸರಬರಾಜು ಮಾಡಿದಾಗ ಮಾತ್ರ ಡೇರಿ ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕೋಮುಲ್ ವಿಸ್ತಾರಣಾಧಿಕಾರಿ ನಾಗೇಂದ್ರ, ಡೇರಿ ಉಪಾಧ್ಯಕ್ಷ ಟಿ.ಸಿ ಶ್ರೀನಿವಾಸ್, ನಿರ್ದೇಶಕರಾದ ವೆಂಕಟಪ್ಪ, ಅಮರಾವತಮ್ಮ, ಟಿ.ವಿ.ನಾಗರಾಜ್, ಟಿ.ಕೆ.ಮಂಜುನಾಥ್, ಟಿ.ಕೆ.ವೆಂಕಟೇಶ್, ಟಿ.ಎನ್.ವೆಂಕಟೇಶ್, ಟಿ.ಎಂ.ಈರೇಗೌಡ, ಮುನಿಶಾಮಪ್ಪ ಸೇರಿದಂತೆ ಗ್ರಾಮದ ಮುಖಂಡರಾದ ಟಿ.ಎನ್.ರವಿ, ವಿಶ್ವನಾಥ್, ದಿನ್ನೂರು ನಾರಾಯಣಸ್ವಾಮಿ, ವೆಂಕಟೇಶಗೌಡ, ಟಿ.ಕೆ.ಶ್ರೀರಾಮ್ ಎನ್.ಶ್ರೀನಿವಾಸ್ ಕಾರ್ಯದರ್ಶಿ ಸಿ.ಆನಂದ್, ಹಾಲು ಪರೀಕ್ಷಕ ವೆಂಕಟೇಶ್ ಸಹಾಯಕ ನಾರಾಯಣಸ್ವಾಮಿ ಗ್ರಾಮಸ್ಥರು ಇದ್ದರು

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

3 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

5 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

8 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

10 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

12 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

12 hours ago