ಕೋಲಾರ: ತಾಲ್ಲೂಕಿನ ಸುಗಟೂರು ಹೋಬಳಿಯ ತುರಾಂಡಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಸಭೆಯು ಅಧ್ಯಕ್ಷ ಟಿ.ಎಂ ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆಯಿತು,
ಈ ಸಂದರ್ಭದಲ್ಲಿ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಸಂಘದ ಆಡಳಿತ ಮಂಡಳಿ ಹಾಗೂ ಹಾಲು ಉತ್ಪಾದಕರ ಸಹಕಾರದಿಂದ 2023-24ನೇ ಸಾಲಿನಲ್ಲಿ 8.46 ಲಕ್ಷದಷ್ಟು ಲಾಭಾಂಶ ಬಂದಿದ್ದು, ನಿವ್ವಳ ಲಾಭವು 4.86 ಲಕ್ಷ ಬಂದಿದೆ ಸುಮಾರು 15 ವರ್ಷದ ಹಿಂದೆ ಪ್ರಾರಂಭವಾದ ಡೇರಿಗೆ ಸ್ವಂತ ಕಟ್ಟಡವಿಲ್ಲವಾಗಿದ್ದು ಬಾಡಿಗೆ ಕಟ್ಟಡದಲ್ಲಿ ಇದ್ದು ಮುಂದೆ ಸ್ವಂತ ಕಟ್ಟಡವನ್ನು ನಿರ್ಮಿಸಲು ಸಂಘದ ನಿರ್ದೇಶಕರು, ಹಾಲು ಉತ್ಪಾದಕರು ಹಾಗೂ ಗ್ರಾಮಸ್ಥರ ಸಹಕಾರವು ಮುಖ್ಯವಾಗಿದೆ ಎಂದರು.
ಸಹಕಾರಿ ವ್ಯವಸ್ಥೆಯಲ್ಲಿ ರಾಜಕಾರಣವನ್ನು ತರದೇ ಪಕ್ಷಾತೀತವಾಗಿ ಅಭಿವೃದ್ಧಿಗೆ ಸಹಕರಿಸಬೇಕು ಹಾಲು ಡೇರಿಗಳು ಅಭಿವೃದ್ಧಿಯಾಗ ಬೇಕಾದರೆ ರೈತರು ಉತ್ತಮ ಕೊಬ್ಬಿನ ಅಂಶವಿರುವ ಹಾಲು ಸರಬರಾಜು ಮಾಡಿದಾಗ ಮಾತ್ರ ಡೇರಿ ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕೋಮುಲ್ ವಿಸ್ತಾರಣಾಧಿಕಾರಿ ನಾಗೇಂದ್ರ, ಡೇರಿ ಉಪಾಧ್ಯಕ್ಷ ಟಿ.ಸಿ ಶ್ರೀನಿವಾಸ್, ನಿರ್ದೇಶಕರಾದ ವೆಂಕಟಪ್ಪ, ಅಮರಾವತಮ್ಮ, ಟಿ.ವಿ.ನಾಗರಾಜ್, ಟಿ.ಕೆ.ಮಂಜುನಾಥ್, ಟಿ.ಕೆ.ವೆಂಕಟೇಶ್, ಟಿ.ಎನ್.ವೆಂಕಟೇಶ್, ಟಿ.ಎಂ.ಈರೇಗೌಡ, ಮುನಿಶಾಮಪ್ಪ ಸೇರಿದಂತೆ ಗ್ರಾಮದ ಮುಖಂಡರಾದ ಟಿ.ಎನ್.ರವಿ, ವಿಶ್ವನಾಥ್, ದಿನ್ನೂರು ನಾರಾಯಣಸ್ವಾಮಿ, ವೆಂಕಟೇಶಗೌಡ, ಟಿ.ಕೆ.ಶ್ರೀರಾಮ್ ಎನ್.ಶ್ರೀನಿವಾಸ್ ಕಾರ್ಯದರ್ಶಿ ಸಿ.ಆನಂದ್, ಹಾಲು ಪರೀಕ್ಷಕ ವೆಂಕಟೇಶ್ ಸಹಾಯಕ ನಾರಾಯಣಸ್ವಾಮಿ ಗ್ರಾಮಸ್ಥರು ಇದ್ದರು
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…