ಕೋಲಾರ: ತಾಲ್ಲೂಕಿನ ಸುಗಟೂರು ಹೋಬಳಿಯ ತುರಾಂಡಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಸಭೆಯು ಅಧ್ಯಕ್ಷ ಟಿ.ಎಂ ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆಯಿತು,
ಈ ಸಂದರ್ಭದಲ್ಲಿ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಸಂಘದ ಆಡಳಿತ ಮಂಡಳಿ ಹಾಗೂ ಹಾಲು ಉತ್ಪಾದಕರ ಸಹಕಾರದಿಂದ 2023-24ನೇ ಸಾಲಿನಲ್ಲಿ 8.46 ಲಕ್ಷದಷ್ಟು ಲಾಭಾಂಶ ಬಂದಿದ್ದು, ನಿವ್ವಳ ಲಾಭವು 4.86 ಲಕ್ಷ ಬಂದಿದೆ ಸುಮಾರು 15 ವರ್ಷದ ಹಿಂದೆ ಪ್ರಾರಂಭವಾದ ಡೇರಿಗೆ ಸ್ವಂತ ಕಟ್ಟಡವಿಲ್ಲವಾಗಿದ್ದು ಬಾಡಿಗೆ ಕಟ್ಟಡದಲ್ಲಿ ಇದ್ದು ಮುಂದೆ ಸ್ವಂತ ಕಟ್ಟಡವನ್ನು ನಿರ್ಮಿಸಲು ಸಂಘದ ನಿರ್ದೇಶಕರು, ಹಾಲು ಉತ್ಪಾದಕರು ಹಾಗೂ ಗ್ರಾಮಸ್ಥರ ಸಹಕಾರವು ಮುಖ್ಯವಾಗಿದೆ ಎಂದರು.
ಸಹಕಾರಿ ವ್ಯವಸ್ಥೆಯಲ್ಲಿ ರಾಜಕಾರಣವನ್ನು ತರದೇ ಪಕ್ಷಾತೀತವಾಗಿ ಅಭಿವೃದ್ಧಿಗೆ ಸಹಕರಿಸಬೇಕು ಹಾಲು ಡೇರಿಗಳು ಅಭಿವೃದ್ಧಿಯಾಗ ಬೇಕಾದರೆ ರೈತರು ಉತ್ತಮ ಕೊಬ್ಬಿನ ಅಂಶವಿರುವ ಹಾಲು ಸರಬರಾಜು ಮಾಡಿದಾಗ ಮಾತ್ರ ಡೇರಿ ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕೋಮುಲ್ ವಿಸ್ತಾರಣಾಧಿಕಾರಿ ನಾಗೇಂದ್ರ, ಡೇರಿ ಉಪಾಧ್ಯಕ್ಷ ಟಿ.ಸಿ ಶ್ರೀನಿವಾಸ್, ನಿರ್ದೇಶಕರಾದ ವೆಂಕಟಪ್ಪ, ಅಮರಾವತಮ್ಮ, ಟಿ.ವಿ.ನಾಗರಾಜ್, ಟಿ.ಕೆ.ಮಂಜುನಾಥ್, ಟಿ.ಕೆ.ವೆಂಕಟೇಶ್, ಟಿ.ಎನ್.ವೆಂಕಟೇಶ್, ಟಿ.ಎಂ.ಈರೇಗೌಡ, ಮುನಿಶಾಮಪ್ಪ ಸೇರಿದಂತೆ ಗ್ರಾಮದ ಮುಖಂಡರಾದ ಟಿ.ಎನ್.ರವಿ, ವಿಶ್ವನಾಥ್, ದಿನ್ನೂರು ನಾರಾಯಣಸ್ವಾಮಿ, ವೆಂಕಟೇಶಗೌಡ, ಟಿ.ಕೆ.ಶ್ರೀರಾಮ್ ಎನ್.ಶ್ರೀನಿವಾಸ್ ಕಾರ್ಯದರ್ಶಿ ಸಿ.ಆನಂದ್, ಹಾಲು ಪರೀಕ್ಷಕ ವೆಂಕಟೇಶ್ ಸಹಾಯಕ ನಾರಾಯಣಸ್ವಾಮಿ ಗ್ರಾಮಸ್ಥರು ಇದ್ದರು
ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…
ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…
ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…
ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ್ಯಾಂಕ್ ಪಡೆದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…