Categories: ಕೋಲಾರ

ತುರಾಂಡಹಳ್ಳಿ ಡೇರಿಗೆ 4.86 ಲಕ್ಷ ನಿವ್ವಳ ಲಾಭ

ಕೋಲಾರ: ತಾಲ್ಲೂಕಿನ ಸುಗಟೂರು ಹೋಬಳಿಯ ತುರಾಂಡಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಸಭೆಯು ಅಧ್ಯಕ್ಷ ಟಿ.ಎಂ ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆಯಿತು,

ಈ ಸಂದರ್ಭದಲ್ಲಿ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಸಂಘದ ಆಡಳಿತ ಮಂಡಳಿ ಹಾಗೂ ಹಾಲು ಉತ್ಪಾದಕರ ಸಹಕಾರದಿಂದ 2023-24ನೇ ಸಾಲಿನಲ್ಲಿ 8.46 ಲಕ್ಷದಷ್ಟು ಲಾಭಾಂಶ ಬಂದಿದ್ದು, ನಿವ್ವಳ ಲಾಭವು 4.86 ಲಕ್ಷ ಬಂದಿದೆ ಸುಮಾರು 15 ವರ್ಷದ ಹಿಂದೆ ಪ್ರಾರಂಭವಾದ ಡೇರಿಗೆ ಸ್ವಂತ ಕಟ್ಟಡವಿಲ್ಲವಾಗಿದ್ದು ಬಾಡಿಗೆ ಕಟ್ಟಡದಲ್ಲಿ ಇದ್ದು ಮುಂದೆ ಸ್ವಂತ ಕಟ್ಟಡವನ್ನು ನಿರ್ಮಿಸಲು ಸಂಘದ ನಿರ್ದೇಶಕರು, ಹಾಲು ಉತ್ಪಾದಕರು ಹಾಗೂ ಗ್ರಾಮಸ್ಥರ ಸಹಕಾರವು ಮುಖ್ಯವಾಗಿದೆ ಎಂದರು.

ಸಹಕಾರಿ ವ್ಯವಸ್ಥೆಯಲ್ಲಿ ರಾಜಕಾರಣವನ್ನು ತರದೇ ಪಕ್ಷಾತೀತವಾಗಿ ಅಭಿವೃದ್ಧಿಗೆ ಸಹಕರಿಸಬೇಕು ಹಾಲು ಡೇರಿಗಳು ಅಭಿವೃದ್ಧಿಯಾಗ ಬೇಕಾದರೆ ರೈತರು ಉತ್ತಮ ಕೊಬ್ಬಿನ ಅಂಶವಿರುವ ಹಾಲು ಸರಬರಾಜು ಮಾಡಿದಾಗ ಮಾತ್ರ ಡೇರಿ ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕೋಮುಲ್ ವಿಸ್ತಾರಣಾಧಿಕಾರಿ ನಾಗೇಂದ್ರ, ಡೇರಿ ಉಪಾಧ್ಯಕ್ಷ ಟಿ.ಸಿ ಶ್ರೀನಿವಾಸ್, ನಿರ್ದೇಶಕರಾದ ವೆಂಕಟಪ್ಪ, ಅಮರಾವತಮ್ಮ, ಟಿ.ವಿ.ನಾಗರಾಜ್, ಟಿ.ಕೆ.ಮಂಜುನಾಥ್, ಟಿ.ಕೆ.ವೆಂಕಟೇಶ್, ಟಿ.ಎನ್.ವೆಂಕಟೇಶ್, ಟಿ.ಎಂ.ಈರೇಗೌಡ, ಮುನಿಶಾಮಪ್ಪ ಸೇರಿದಂತೆ ಗ್ರಾಮದ ಮುಖಂಡರಾದ ಟಿ.ಎನ್.ರವಿ, ವಿಶ್ವನಾಥ್, ದಿನ್ನೂರು ನಾರಾಯಣಸ್ವಾಮಿ, ವೆಂಕಟೇಶಗೌಡ, ಟಿ.ಕೆ.ಶ್ರೀರಾಮ್ ಎನ್.ಶ್ರೀನಿವಾಸ್ ಕಾರ್ಯದರ್ಶಿ ಸಿ.ಆನಂದ್, ಹಾಲು ಪರೀಕ್ಷಕ ವೆಂಕಟೇಶ್ ಸಹಾಯಕ ನಾರಾಯಣಸ್ವಾಮಿ ಗ್ರಾಮಸ್ಥರು ಇದ್ದರು

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

21 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago