Categories: ಕೋಲಾರ

ತುರಾಂಡಹಳ್ಳಿ ಡೇರಿ ಅಧ್ಯಕ್ಷರಾಗಿ ಟಿ.ಎಂ ವೆಂಕಟೇಶ್ ಅವಿರೋಧ ಆಯ್ಕೆ

ಕೋಲಾರ: ತಾಲ್ಲೂಕಿನ ತುರಾಂಡಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತುರಾಂಡಹಳ್ಳಿ ಗ್ರಾಮದ ಡೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಟಿ.ಎಂ ವೆಂಕಟೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಟಿ.ಸಿ ಶ್ರೀನಿವಾಸ್ ಅವರು ಮಾತ್ರವೇ ನಾಮಪತ್ರ ಸಲ್ಲಿಸಲಾಗಿದ್ದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಣೆ ಮಾಡಿದರು

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಕಟ್ಟಡ ಮಾಡುವುದು ನಮ್ಮ ಸಮಿತಿಯ ಗುರಿಯಾಗಿದೆ ಹಾಲು ಉತ್ಪಾದಕರ ಆರೋಗ್ಯವಿಮೆ ಬಗ್ಗೆ ಜಾಗೃತಿ ಮೂಡಿಸಿ, ವಿಮೆ ಮಾಡಿಸಲಾಗುವುದು ನಮ್ಮ ಸಹಕಾರ ಸಂಘವನ್ನೂ ಇನ್ನಷ್ಟೂ ಅಭಿವೃದ್ದಿಪಡಿಸಿ, ಹಾಲು ಉತ್ಪಾದಕರಿಗೆ ಹೆಚ್ಚಿನ ಪ್ರೋತ್ಸಾಹ ಧನ ನೀಡಲು ಪ್ರಯತ್ನ ಮಾಡಲಾಗುವುದು. ರೈತರು ಗುಣಮಟ್ಟದ ಹಾಲು ಪೂರೈಸಿ ಸಂಘದ ಅಭಿವೃದ್ದಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತುರಾಂಡಹಳ್ಳಿ ಡೇರಿಯ ನಿರ್ದೇಶಕರಾದ ವೆಂಕಟಪ್ಪ, ಅಮರಾವತಮ್ಮ, ಜಿ.ಉಮಾ, ಟಿ.ವಿ.ನಾಗರಾಜ್, ಟಿ.ಕೆ.ಮಂಜುನಾಥ್, ಟಿ.ಕೆ.ವೆಂಕಟೇಶ್, ಟಿ.ಎನ್.ವೆಂಕಟೇಶ್, ಟಿ.ಎಂ.ಈರೇಗೌಡ, ಮುನಿಶಾಮಪ್ಪ ಸೇರಿದಂತೆ ಗ್ರಾಮದ ಮುಖಂಡರಾದ ಟಿ.ಎನ್.ರವಿ ಟಿ.ಕೆ.ಶ್ರೀರಾಮ್ ಎನ್.ಶ್ರೀನಿವಾಸ್ ಕಾರ್ಯದರ್ಶಿ ಸಿ.ಆನಂದ್, ಹಾಲು ಪರೀಕ್ಷಕ ವೆಂಕಟೇಶ್ ಗ್ರಾಮಸ್ಥರು ಇದ್ದರು

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 hour ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

3 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

3 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

5 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

13 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

22 hours ago