ಕೋಲಾರ: ತಾಲ್ಲೂಕಿನ ತುರಾಂಡಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತುರಾಂಡಹಳ್ಳಿ ಗ್ರಾಮದ ಡೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಟಿ.ಎಂ ವೆಂಕಟೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಟಿ.ಸಿ ಶ್ರೀನಿವಾಸ್ ಅವರು ಮಾತ್ರವೇ ನಾಮಪತ್ರ ಸಲ್ಲಿಸಲಾಗಿದ್ದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಣೆ ಮಾಡಿದರು
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಕಟ್ಟಡ ಮಾಡುವುದು ನಮ್ಮ ಸಮಿತಿಯ ಗುರಿಯಾಗಿದೆ ಹಾಲು ಉತ್ಪಾದಕರ ಆರೋಗ್ಯವಿಮೆ ಬಗ್ಗೆ ಜಾಗೃತಿ ಮೂಡಿಸಿ, ವಿಮೆ ಮಾಡಿಸಲಾಗುವುದು ನಮ್ಮ ಸಹಕಾರ ಸಂಘವನ್ನೂ ಇನ್ನಷ್ಟೂ ಅಭಿವೃದ್ದಿಪಡಿಸಿ, ಹಾಲು ಉತ್ಪಾದಕರಿಗೆ ಹೆಚ್ಚಿನ ಪ್ರೋತ್ಸಾಹ ಧನ ನೀಡಲು ಪ್ರಯತ್ನ ಮಾಡಲಾಗುವುದು. ರೈತರು ಗುಣಮಟ್ಟದ ಹಾಲು ಪೂರೈಸಿ ಸಂಘದ ಅಭಿವೃದ್ದಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತುರಾಂಡಹಳ್ಳಿ ಡೇರಿಯ ನಿರ್ದೇಶಕರಾದ ವೆಂಕಟಪ್ಪ, ಅಮರಾವತಮ್ಮ, ಜಿ.ಉಮಾ, ಟಿ.ವಿ.ನಾಗರಾಜ್, ಟಿ.ಕೆ.ಮಂಜುನಾಥ್, ಟಿ.ಕೆ.ವೆಂಕಟೇಶ್, ಟಿ.ಎನ್.ವೆಂಕಟೇಶ್, ಟಿ.ಎಂ.ಈರೇಗೌಡ, ಮುನಿಶಾಮಪ್ಪ ಸೇರಿದಂತೆ ಗ್ರಾಮದ ಮುಖಂಡರಾದ ಟಿ.ಎನ್.ರವಿ ಟಿ.ಕೆ.ಶ್ರೀರಾಮ್ ಎನ್.ಶ್ರೀನಿವಾಸ್ ಕಾರ್ಯದರ್ಶಿ ಸಿ.ಆನಂದ್, ಹಾಲು ಪರೀಕ್ಷಕ ವೆಂಕಟೇಶ್ ಗ್ರಾಮಸ್ಥರು ಇದ್ದರು
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…