ಕೋಲಾರ: ತಾಲ್ಲೂಕಿನ ತುರಾಂಡಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತುರಾಂಡಹಳ್ಳಿ ಗ್ರಾಮದ ಡೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಟಿ.ಎಂ ವೆಂಕಟೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಟಿ.ಸಿ ಶ್ರೀನಿವಾಸ್ ಅವರು ಮಾತ್ರವೇ ನಾಮಪತ್ರ ಸಲ್ಲಿಸಲಾಗಿದ್ದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಣೆ ಮಾಡಿದರು
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಕಟ್ಟಡ ಮಾಡುವುದು ನಮ್ಮ ಸಮಿತಿಯ ಗುರಿಯಾಗಿದೆ ಹಾಲು ಉತ್ಪಾದಕರ ಆರೋಗ್ಯವಿಮೆ ಬಗ್ಗೆ ಜಾಗೃತಿ ಮೂಡಿಸಿ, ವಿಮೆ ಮಾಡಿಸಲಾಗುವುದು ನಮ್ಮ ಸಹಕಾರ ಸಂಘವನ್ನೂ ಇನ್ನಷ್ಟೂ ಅಭಿವೃದ್ದಿಪಡಿಸಿ, ಹಾಲು ಉತ್ಪಾದಕರಿಗೆ ಹೆಚ್ಚಿನ ಪ್ರೋತ್ಸಾಹ ಧನ ನೀಡಲು ಪ್ರಯತ್ನ ಮಾಡಲಾಗುವುದು. ರೈತರು ಗುಣಮಟ್ಟದ ಹಾಲು ಪೂರೈಸಿ ಸಂಘದ ಅಭಿವೃದ್ದಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತುರಾಂಡಹಳ್ಳಿ ಡೇರಿಯ ನಿರ್ದೇಶಕರಾದ ವೆಂಕಟಪ್ಪ, ಅಮರಾವತಮ್ಮ, ಜಿ.ಉಮಾ, ಟಿ.ವಿ.ನಾಗರಾಜ್, ಟಿ.ಕೆ.ಮಂಜುನಾಥ್, ಟಿ.ಕೆ.ವೆಂಕಟೇಶ್, ಟಿ.ಎನ್.ವೆಂಕಟೇಶ್, ಟಿ.ಎಂ.ಈರೇಗೌಡ, ಮುನಿಶಾಮಪ್ಪ ಸೇರಿದಂತೆ ಗ್ರಾಮದ ಮುಖಂಡರಾದ ಟಿ.ಎನ್.ರವಿ ಟಿ.ಕೆ.ಶ್ರೀರಾಮ್ ಎನ್.ಶ್ರೀನಿವಾಸ್ ಕಾರ್ಯದರ್ಶಿ ಸಿ.ಆನಂದ್, ಹಾಲು ಪರೀಕ್ಷಕ ವೆಂಕಟೇಶ್ ಗ್ರಾಮಸ್ಥರು ಇದ್ದರು
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…