ಕೋಲಾರ: ತಾಲ್ಲೂಕಿನ ತುರಾಂಡಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತುರಾಂಡಹಳ್ಳಿ ಗ್ರಾಮದ ಡೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಟಿ.ಎಂ ವೆಂಕಟೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಟಿ.ಸಿ ಶ್ರೀನಿವಾಸ್ ಅವರು ಮಾತ್ರವೇ ನಾಮಪತ್ರ ಸಲ್ಲಿಸಲಾಗಿದ್ದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಣೆ ಮಾಡಿದರು
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಕಟ್ಟಡ ಮಾಡುವುದು ನಮ್ಮ ಸಮಿತಿಯ ಗುರಿಯಾಗಿದೆ ಹಾಲು ಉತ್ಪಾದಕರ ಆರೋಗ್ಯವಿಮೆ ಬಗ್ಗೆ ಜಾಗೃತಿ ಮೂಡಿಸಿ, ವಿಮೆ ಮಾಡಿಸಲಾಗುವುದು ನಮ್ಮ ಸಹಕಾರ ಸಂಘವನ್ನೂ ಇನ್ನಷ್ಟೂ ಅಭಿವೃದ್ದಿಪಡಿಸಿ, ಹಾಲು ಉತ್ಪಾದಕರಿಗೆ ಹೆಚ್ಚಿನ ಪ್ರೋತ್ಸಾಹ ಧನ ನೀಡಲು ಪ್ರಯತ್ನ ಮಾಡಲಾಗುವುದು. ರೈತರು ಗುಣಮಟ್ಟದ ಹಾಲು ಪೂರೈಸಿ ಸಂಘದ ಅಭಿವೃದ್ದಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತುರಾಂಡಹಳ್ಳಿ ಡೇರಿಯ ನಿರ್ದೇಶಕರಾದ ವೆಂಕಟಪ್ಪ, ಅಮರಾವತಮ್ಮ, ಜಿ.ಉಮಾ, ಟಿ.ವಿ.ನಾಗರಾಜ್, ಟಿ.ಕೆ.ಮಂಜುನಾಥ್, ಟಿ.ಕೆ.ವೆಂಕಟೇಶ್, ಟಿ.ಎನ್.ವೆಂಕಟೇಶ್, ಟಿ.ಎಂ.ಈರೇಗೌಡ, ಮುನಿಶಾಮಪ್ಪ ಸೇರಿದಂತೆ ಗ್ರಾಮದ ಮುಖಂಡರಾದ ಟಿ.ಎನ್.ರವಿ ಟಿ.ಕೆ.ಶ್ರೀರಾಮ್ ಎನ್.ಶ್ರೀನಿವಾಸ್ ಕಾರ್ಯದರ್ಶಿ ಸಿ.ಆನಂದ್, ಹಾಲು ಪರೀಕ್ಷಕ ವೆಂಕಟೇಶ್ ಗ್ರಾಮಸ್ಥರು ಇದ್ದರು
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…