ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ವಿಚಾರ: ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ‌ ಅವರು ಮಾತನಾಡಿದರು.

ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ.   ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.

ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ. ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಬಂದು ನೋಡುವ, ಪ್ರೋತ್ಸಾಹಿಸುವ ಅವಕಾಶ ದೊರೆತಿದೆ ಎಂದು ಹೇಳಿದರು.

ಹಿಂದೊಮ್ಮೆ ಉಡುಪಿ ಹಾಗೂ ಬಂಟ್ವಾಳ ಭಾಗದಲ್ಲಿ ಕಂಬಳ ಉದ್ಘಾಟಿಸಿದ್ದೆ. ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಜನರ ಕಲೆಯನ್ನು ಬಹಳ ಜನ ಮೈಗೂಡಿಸಿಕೊಂಡಿದ್ದಾರೆ. ಬಹಳ ಜನ ಇದಕ್ಕೆ ಪ್ರೋತ್ಸಾಹ ನೀಡುತ್ತಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆ ಇದ್ದಂತೆ ಕಂಬಳದಲ್ಲಿ ಕೋಣಗಳಿಗೆ ನೊಗ ಹಾಕಿ ಓಡಿಸುತ್ತಾರೆ ಎಂದು ತಿಳಿಸಿದರು.

ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಕೋಣ ಸಾಕಲು ಒಂದು ವರ್ಷಕ್ಕೆ 15 ಲಕ್ಷದವರೆಗೆ ವೆಚ್ಚವಾಗುತ್ತದೆ. ತಿಂಗಳಿಗೆ 1 ಲಕ್ಷಕ್ಕಿಂತ ಹೆಚ್ಚಾಗುತ್ತದೆ. ನವೆಂಬರ್, ಡಿಸೆಂಬರ್, ಫೆಬ್ರವರಿ ಮಾರ್ಚ್ ತಿಂಗಳುಗಳಲ್ಲಿ ವ್ಯವಸಾಯ ಇಲ್ಲದಿದ್ದಾಗ ಜನ ಜಾನುವಾರುಗಳ ಉತ್ಸವ ಮಾಡಿ ಮನರಂಜನೆ ಪಡೆಯುತ್ತಿದ್ದರು. ಗದ್ದೆಗಳಲ್ಲಿ ಮಣ್ಣನ್ನು ಹದಗೊಳಿಸಿ ಕಂಬಳ ಆಡಿಸುತ್ತಿದ್ದರು. ಕೋಣಗಳನ್ನು ಓಡುವವರಿಗೆ ಅಭ್ಯಾಸವಿರಬೇಕು. ಕ್ರೀಡಾಪಟುವಾಗಿದ್ದರೆ ಮಾತ್ರ ಕೋಣಗಳ ಜೊತೆಗೆ ಓಡಲು ಸಾಧ್ಯ ಎಂದರು.

ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು. ನವೆಂಬರ್, ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಿದರೆ ಜನ ನೋಡುತ್ತಾರೆ. ಇದೊಂದು ಮನರಂಜನೆಯ ಕ್ರೀಡೆಯಾಗುತ್ತದೆ ಎಂದು ಹೇಳಿದ್ದಾರೆ.

ಜಲ್ಲಿಕಟ್ಟು, ಕಂಬಳ ನಡೆಸಬಾರದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದಕ್ಕೆ ಸುಗ್ರೀವಾಜ್ಞೆ ಹೊರಡಿಸಿ ಜನಪ್ರಿಯ ಕ್ರೀಡೆ ಉಳಿಸುವ ಕೆಲಸವಾಗಿದೆ. ಇದನ್ನು ಬೆಳಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಮುದಾಯ ಭವನಕ್ಕಾಗಿ ನಿವೇಶನ ಕೋರಿದ್ದು, ಇದಕ್ಕೂ ನಾವು ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

2 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

5 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

12 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

13 hours ago