ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ವಿಚಾರ: ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ‌ ಅವರು ಮಾತನಾಡಿದರು.

ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ.   ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.

ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ. ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಬಂದು ನೋಡುವ, ಪ್ರೋತ್ಸಾಹಿಸುವ ಅವಕಾಶ ದೊರೆತಿದೆ ಎಂದು ಹೇಳಿದರು.

ಹಿಂದೊಮ್ಮೆ ಉಡುಪಿ ಹಾಗೂ ಬಂಟ್ವಾಳ ಭಾಗದಲ್ಲಿ ಕಂಬಳ ಉದ್ಘಾಟಿಸಿದ್ದೆ. ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಜನರ ಕಲೆಯನ್ನು ಬಹಳ ಜನ ಮೈಗೂಡಿಸಿಕೊಂಡಿದ್ದಾರೆ. ಬಹಳ ಜನ ಇದಕ್ಕೆ ಪ್ರೋತ್ಸಾಹ ನೀಡುತ್ತಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆ ಇದ್ದಂತೆ ಕಂಬಳದಲ್ಲಿ ಕೋಣಗಳಿಗೆ ನೊಗ ಹಾಕಿ ಓಡಿಸುತ್ತಾರೆ ಎಂದು ತಿಳಿಸಿದರು.

ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಕೋಣ ಸಾಕಲು ಒಂದು ವರ್ಷಕ್ಕೆ 15 ಲಕ್ಷದವರೆಗೆ ವೆಚ್ಚವಾಗುತ್ತದೆ. ತಿಂಗಳಿಗೆ 1 ಲಕ್ಷಕ್ಕಿಂತ ಹೆಚ್ಚಾಗುತ್ತದೆ. ನವೆಂಬರ್, ಡಿಸೆಂಬರ್, ಫೆಬ್ರವರಿ ಮಾರ್ಚ್ ತಿಂಗಳುಗಳಲ್ಲಿ ವ್ಯವಸಾಯ ಇಲ್ಲದಿದ್ದಾಗ ಜನ ಜಾನುವಾರುಗಳ ಉತ್ಸವ ಮಾಡಿ ಮನರಂಜನೆ ಪಡೆಯುತ್ತಿದ್ದರು. ಗದ್ದೆಗಳಲ್ಲಿ ಮಣ್ಣನ್ನು ಹದಗೊಳಿಸಿ ಕಂಬಳ ಆಡಿಸುತ್ತಿದ್ದರು. ಕೋಣಗಳನ್ನು ಓಡುವವರಿಗೆ ಅಭ್ಯಾಸವಿರಬೇಕು. ಕ್ರೀಡಾಪಟುವಾಗಿದ್ದರೆ ಮಾತ್ರ ಕೋಣಗಳ ಜೊತೆಗೆ ಓಡಲು ಸಾಧ್ಯ ಎಂದರು.

ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು. ನವೆಂಬರ್, ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಿದರೆ ಜನ ನೋಡುತ್ತಾರೆ. ಇದೊಂದು ಮನರಂಜನೆಯ ಕ್ರೀಡೆಯಾಗುತ್ತದೆ ಎಂದು ಹೇಳಿದ್ದಾರೆ.

ಜಲ್ಲಿಕಟ್ಟು, ಕಂಬಳ ನಡೆಸಬಾರದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದಕ್ಕೆ ಸುಗ್ರೀವಾಜ್ಞೆ ಹೊರಡಿಸಿ ಜನಪ್ರಿಯ ಕ್ರೀಡೆ ಉಳಿಸುವ ಕೆಲಸವಾಗಿದೆ. ಇದನ್ನು ಬೆಳಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಮುದಾಯ ಭವನಕ್ಕಾಗಿ ನಿವೇಶನ ಕೋರಿದ್ದು, ಇದಕ್ಕೂ ನಾವು ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

8 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

9 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago