ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ವಿಚಾರ: ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ‌ ಅವರು ಮಾತನಾಡಿದರು.

ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ.   ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.

ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ. ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಬಂದು ನೋಡುವ, ಪ್ರೋತ್ಸಾಹಿಸುವ ಅವಕಾಶ ದೊರೆತಿದೆ ಎಂದು ಹೇಳಿದರು.

ಹಿಂದೊಮ್ಮೆ ಉಡುಪಿ ಹಾಗೂ ಬಂಟ್ವಾಳ ಭಾಗದಲ್ಲಿ ಕಂಬಳ ಉದ್ಘಾಟಿಸಿದ್ದೆ. ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಜನರ ಕಲೆಯನ್ನು ಬಹಳ ಜನ ಮೈಗೂಡಿಸಿಕೊಂಡಿದ್ದಾರೆ. ಬಹಳ ಜನ ಇದಕ್ಕೆ ಪ್ರೋತ್ಸಾಹ ನೀಡುತ್ತಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆ ಇದ್ದಂತೆ ಕಂಬಳದಲ್ಲಿ ಕೋಣಗಳಿಗೆ ನೊಗ ಹಾಕಿ ಓಡಿಸುತ್ತಾರೆ ಎಂದು ತಿಳಿಸಿದರು.

ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಕೋಣ ಸಾಕಲು ಒಂದು ವರ್ಷಕ್ಕೆ 15 ಲಕ್ಷದವರೆಗೆ ವೆಚ್ಚವಾಗುತ್ತದೆ. ತಿಂಗಳಿಗೆ 1 ಲಕ್ಷಕ್ಕಿಂತ ಹೆಚ್ಚಾಗುತ್ತದೆ. ನವೆಂಬರ್, ಡಿಸೆಂಬರ್, ಫೆಬ್ರವರಿ ಮಾರ್ಚ್ ತಿಂಗಳುಗಳಲ್ಲಿ ವ್ಯವಸಾಯ ಇಲ್ಲದಿದ್ದಾಗ ಜನ ಜಾನುವಾರುಗಳ ಉತ್ಸವ ಮಾಡಿ ಮನರಂಜನೆ ಪಡೆಯುತ್ತಿದ್ದರು. ಗದ್ದೆಗಳಲ್ಲಿ ಮಣ್ಣನ್ನು ಹದಗೊಳಿಸಿ ಕಂಬಳ ಆಡಿಸುತ್ತಿದ್ದರು. ಕೋಣಗಳನ್ನು ಓಡುವವರಿಗೆ ಅಭ್ಯಾಸವಿರಬೇಕು. ಕ್ರೀಡಾಪಟುವಾಗಿದ್ದರೆ ಮಾತ್ರ ಕೋಣಗಳ ಜೊತೆಗೆ ಓಡಲು ಸಾಧ್ಯ ಎಂದರು.

ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು. ನವೆಂಬರ್, ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಿದರೆ ಜನ ನೋಡುತ್ತಾರೆ. ಇದೊಂದು ಮನರಂಜನೆಯ ಕ್ರೀಡೆಯಾಗುತ್ತದೆ ಎಂದು ಹೇಳಿದ್ದಾರೆ.

ಜಲ್ಲಿಕಟ್ಟು, ಕಂಬಳ ನಡೆಸಬಾರದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದಕ್ಕೆ ಸುಗ್ರೀವಾಜ್ಞೆ ಹೊರಡಿಸಿ ಜನಪ್ರಿಯ ಕ್ರೀಡೆ ಉಳಿಸುವ ಕೆಲಸವಾಗಿದೆ. ಇದನ್ನು ಬೆಳಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಮುದಾಯ ಭವನಕ್ಕಾಗಿ ನಿವೇಶನ ಕೋರಿದ್ದು, ಇದಕ್ಕೂ ನಾವು ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 hour ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

7 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

11 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

14 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago