ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ವಿಚಾರ: ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ‌ ಅವರು ಮಾತನಾಡಿದರು.

ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ.   ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.

ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ. ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಬಂದು ನೋಡುವ, ಪ್ರೋತ್ಸಾಹಿಸುವ ಅವಕಾಶ ದೊರೆತಿದೆ ಎಂದು ಹೇಳಿದರು.

ಹಿಂದೊಮ್ಮೆ ಉಡುಪಿ ಹಾಗೂ ಬಂಟ್ವಾಳ ಭಾಗದಲ್ಲಿ ಕಂಬಳ ಉದ್ಘಾಟಿಸಿದ್ದೆ. ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಜನರ ಕಲೆಯನ್ನು ಬಹಳ ಜನ ಮೈಗೂಡಿಸಿಕೊಂಡಿದ್ದಾರೆ. ಬಹಳ ಜನ ಇದಕ್ಕೆ ಪ್ರೋತ್ಸಾಹ ನೀಡುತ್ತಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆ ಇದ್ದಂತೆ ಕಂಬಳದಲ್ಲಿ ಕೋಣಗಳಿಗೆ ನೊಗ ಹಾಕಿ ಓಡಿಸುತ್ತಾರೆ ಎಂದು ತಿಳಿಸಿದರು.

ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಕೋಣ ಸಾಕಲು ಒಂದು ವರ್ಷಕ್ಕೆ 15 ಲಕ್ಷದವರೆಗೆ ವೆಚ್ಚವಾಗುತ್ತದೆ. ತಿಂಗಳಿಗೆ 1 ಲಕ್ಷಕ್ಕಿಂತ ಹೆಚ್ಚಾಗುತ್ತದೆ. ನವೆಂಬರ್, ಡಿಸೆಂಬರ್, ಫೆಬ್ರವರಿ ಮಾರ್ಚ್ ತಿಂಗಳುಗಳಲ್ಲಿ ವ್ಯವಸಾಯ ಇಲ್ಲದಿದ್ದಾಗ ಜನ ಜಾನುವಾರುಗಳ ಉತ್ಸವ ಮಾಡಿ ಮನರಂಜನೆ ಪಡೆಯುತ್ತಿದ್ದರು. ಗದ್ದೆಗಳಲ್ಲಿ ಮಣ್ಣನ್ನು ಹದಗೊಳಿಸಿ ಕಂಬಳ ಆಡಿಸುತ್ತಿದ್ದರು. ಕೋಣಗಳನ್ನು ಓಡುವವರಿಗೆ ಅಭ್ಯಾಸವಿರಬೇಕು. ಕ್ರೀಡಾಪಟುವಾಗಿದ್ದರೆ ಮಾತ್ರ ಕೋಣಗಳ ಜೊತೆಗೆ ಓಡಲು ಸಾಧ್ಯ ಎಂದರು.

ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು. ನವೆಂಬರ್, ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಿದರೆ ಜನ ನೋಡುತ್ತಾರೆ. ಇದೊಂದು ಮನರಂಜನೆಯ ಕ್ರೀಡೆಯಾಗುತ್ತದೆ ಎಂದು ಹೇಳಿದ್ದಾರೆ.

ಜಲ್ಲಿಕಟ್ಟು, ಕಂಬಳ ನಡೆಸಬಾರದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದಕ್ಕೆ ಸುಗ್ರೀವಾಜ್ಞೆ ಹೊರಡಿಸಿ ಜನಪ್ರಿಯ ಕ್ರೀಡೆ ಉಳಿಸುವ ಕೆಲಸವಾಗಿದೆ. ಇದನ್ನು ಬೆಳಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಮುದಾಯ ಭವನಕ್ಕಾಗಿ ನಿವೇಶನ ಕೋರಿದ್ದು, ಇದಕ್ಕೂ ನಾವು ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

59 minutes ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

6 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago