ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ವಿಚಾರ: ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ‌ ಅವರು ಮಾತನಾಡಿದರು.

ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ.   ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.

ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ. ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಬಂದು ನೋಡುವ, ಪ್ರೋತ್ಸಾಹಿಸುವ ಅವಕಾಶ ದೊರೆತಿದೆ ಎಂದು ಹೇಳಿದರು.

ಹಿಂದೊಮ್ಮೆ ಉಡುಪಿ ಹಾಗೂ ಬಂಟ್ವಾಳ ಭಾಗದಲ್ಲಿ ಕಂಬಳ ಉದ್ಘಾಟಿಸಿದ್ದೆ. ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಜನರ ಕಲೆಯನ್ನು ಬಹಳ ಜನ ಮೈಗೂಡಿಸಿಕೊಂಡಿದ್ದಾರೆ. ಬಹಳ ಜನ ಇದಕ್ಕೆ ಪ್ರೋತ್ಸಾಹ ನೀಡುತ್ತಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆ ಇದ್ದಂತೆ ಕಂಬಳದಲ್ಲಿ ಕೋಣಗಳಿಗೆ ನೊಗ ಹಾಕಿ ಓಡಿಸುತ್ತಾರೆ ಎಂದು ತಿಳಿಸಿದರು.

ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಕೋಣ ಸಾಕಲು ಒಂದು ವರ್ಷಕ್ಕೆ 15 ಲಕ್ಷದವರೆಗೆ ವೆಚ್ಚವಾಗುತ್ತದೆ. ತಿಂಗಳಿಗೆ 1 ಲಕ್ಷಕ್ಕಿಂತ ಹೆಚ್ಚಾಗುತ್ತದೆ. ನವೆಂಬರ್, ಡಿಸೆಂಬರ್, ಫೆಬ್ರವರಿ ಮಾರ್ಚ್ ತಿಂಗಳುಗಳಲ್ಲಿ ವ್ಯವಸಾಯ ಇಲ್ಲದಿದ್ದಾಗ ಜನ ಜಾನುವಾರುಗಳ ಉತ್ಸವ ಮಾಡಿ ಮನರಂಜನೆ ಪಡೆಯುತ್ತಿದ್ದರು. ಗದ್ದೆಗಳಲ್ಲಿ ಮಣ್ಣನ್ನು ಹದಗೊಳಿಸಿ ಕಂಬಳ ಆಡಿಸುತ್ತಿದ್ದರು. ಕೋಣಗಳನ್ನು ಓಡುವವರಿಗೆ ಅಭ್ಯಾಸವಿರಬೇಕು. ಕ್ರೀಡಾಪಟುವಾಗಿದ್ದರೆ ಮಾತ್ರ ಕೋಣಗಳ ಜೊತೆಗೆ ಓಡಲು ಸಾಧ್ಯ ಎಂದರು.

ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು. ನವೆಂಬರ್, ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಿದರೆ ಜನ ನೋಡುತ್ತಾರೆ. ಇದೊಂದು ಮನರಂಜನೆಯ ಕ್ರೀಡೆಯಾಗುತ್ತದೆ ಎಂದು ಹೇಳಿದ್ದಾರೆ.

ಜಲ್ಲಿಕಟ್ಟು, ಕಂಬಳ ನಡೆಸಬಾರದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದಕ್ಕೆ ಸುಗ್ರೀವಾಜ್ಞೆ ಹೊರಡಿಸಿ ಜನಪ್ರಿಯ ಕ್ರೀಡೆ ಉಳಿಸುವ ಕೆಲಸವಾಗಿದೆ. ಇದನ್ನು ಬೆಳಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಮುದಾಯ ಭವನಕ್ಕಾಗಿ ನಿವೇಶನ ಕೋರಿದ್ದು, ಇದಕ್ಕೂ ನಾವು ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ

Ramesh Babu

Journalist

Recent Posts

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

4 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

18 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

18 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

18 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

18 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

21 hours ago