ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ ಇರಬೇಕು. ಇದರಿಂದ ವಯೋವೃದ್ಧರು, ಮಕ್ಕಳು, ಮಹಿಳೆಯರಿಗೆ ಉಪಯುಕ್ತವಾಗುತ್ತದೆ ಎಂದು ಡಾ. ಜ್ಞಾನೇಶ್ವರಿ ಹೇಳಿದರು.
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಇಂದು (ಏ.5ರ ಭಾನುವಾರ) ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ ಟ್ರಸ್ಟ್ ಮತ್ತು ಸಾಯಿ ಮಿಲನ ಮೆಡಿಕಲ್ ಸೆಂಟರ್ ಇವರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಆರೋಗ್ಯ ಶಿಬಿರವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ. ಕೃಷಿ ಕೆಲಸದ ನಡುವೆ ವೈಯಕ್ತಿಕ ಆರೋಗ್ಯ ತಪಾಸಣೆ ಮೂಲಕ ನೆಮ್ಮದಿಯ ಜೀವನ ಸಾಗಿಸಬೇಕು ಎಂದರು.
ಎಲ್ಲರೂ ಆರೋಗ್ಯ ತಪಾಸಣೆಯನ್ನು ಕಡ್ಡಾಯವಾಗಿ ಮಾಡಿಸಲೇಬೇಕು. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಬಡವರು, ಮಧ್ಯಮ ವರ್ಗದವರು ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ನಂತರ ಮುಖಂಡರು ಮಾತನಾಡಿ, ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಲೇಸು. ಗ್ರಾಮೀಣ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿರುವುದು ಶ್ಲಾಘನೀಯ. ಗ್ರಾಮೀಣ ಭಾಗದ ಸಾಮಾನ್ಯ ಜನರು ದೂರದ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಲಾಗದ ಸ್ಥಿತಿಯಲ್ಲಿದ್ದು, ಇಂತಹ ಆರೋಗ್ಯ ತಪಾಸಣಾ ಶಿಬಿರಗಳಿಂದ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಲು ಸಾಧ್ಯ ಎಂದರು.
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಡಾ. ಜ್ಞಾನೇಶ್ವರಿ ಮತ್ತು ಡಾಕ್ಟರ್ ಜಯಕುಮಾರ್ ಅವರು ನೆರವೇರಿಸಿಕೊಟ್ಟರು.
ಈ ವೇಳೆ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಘಾಟಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ ಮಂಜುನಾಥ್ ನಾಗೇನಹಳ್ಳಿ, ಎಸ್ ಮಂಜುನಾಥ್ ಮೇಲೆಕೋಟೆ ಕ್ರಾಸ್, ಶ್ರೀನಿವಾಸ್ ಗೊಲ್ಲಹಳ್ಳಿ, ತೂಬಗೆರೆ ಹೋಬಳಿ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ನರಸಿಂಹಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು…
Mastercard is just one of one of the most widely approved and relied on payment…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
When it involves on-line gambling enterpris padişahbet günceles, among one of the most tempting deals…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…