ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ ಇರಬೇಕು. ಇದರಿಂದ ವಯೋವೃದ್ಧರು, ಮಕ್ಕಳು, ಮಹಿಳೆಯರಿಗೆ ಉಪಯುಕ್ತವಾಗುತ್ತದೆ ಎಂದು ಡಾ. ಜ್ಞಾನೇಶ್ವರಿ ಹೇಳಿದರು.
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಇಂದು (ಏ.5ರ ಭಾನುವಾರ) ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ ಟ್ರಸ್ಟ್ ಮತ್ತು ಸಾಯಿ ಮಿಲನ ಮೆಡಿಕಲ್ ಸೆಂಟರ್ ಇವರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಆರೋಗ್ಯ ಶಿಬಿರವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ. ಕೃಷಿ ಕೆಲಸದ ನಡುವೆ ವೈಯಕ್ತಿಕ ಆರೋಗ್ಯ ತಪಾಸಣೆ ಮೂಲಕ ನೆಮ್ಮದಿಯ ಜೀವನ ಸಾಗಿಸಬೇಕು ಎಂದರು.
ಎಲ್ಲರೂ ಆರೋಗ್ಯ ತಪಾಸಣೆಯನ್ನು ಕಡ್ಡಾಯವಾಗಿ ಮಾಡಿಸಲೇಬೇಕು. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಬಡವರು, ಮಧ್ಯಮ ವರ್ಗದವರು ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ನಂತರ ಮುಖಂಡರು ಮಾತನಾಡಿ, ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಲೇಸು. ಗ್ರಾಮೀಣ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿರುವುದು ಶ್ಲಾಘನೀಯ. ಗ್ರಾಮೀಣ ಭಾಗದ ಸಾಮಾನ್ಯ ಜನರು ದೂರದ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಲಾಗದ ಸ್ಥಿತಿಯಲ್ಲಿದ್ದು, ಇಂತಹ ಆರೋಗ್ಯ ತಪಾಸಣಾ ಶಿಬಿರಗಳಿಂದ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಲು ಸಾಧ್ಯ ಎಂದರು.
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಡಾ. ಜ್ಞಾನೇಶ್ವರಿ ಮತ್ತು ಡಾಕ್ಟರ್ ಜಯಕುಮಾರ್ ಅವರು ನೆರವೇರಿಸಿಕೊಟ್ಟರು.
ಈ ವೇಳೆ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಘಾಟಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ ಮಂಜುನಾಥ್ ನಾಗೇನಹಳ್ಳಿ, ಎಸ್ ಮಂಜುನಾಥ್ ಮೇಲೆಕೋಟೆ ಕ್ರಾಸ್, ಶ್ರೀನಿವಾಸ್ ಗೊಲ್ಲಹಳ್ಳಿ, ತೂಬಗೆರೆ ಹೋಬಳಿ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ನರಸಿಂಹಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…