ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ ಇರಬೇಕು. ಇದರಿಂದ ವಯೋವೃದ್ಧರು, ಮಕ್ಕಳು, ಮಹಿಳೆಯರಿಗೆ ಉಪಯುಕ್ತವಾಗುತ್ತದೆ ಎಂದು ಡಾ. ಜ್ಞಾನೇಶ್ವರಿ ಹೇಳಿದರು.
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಇಂದು (ಏ.5ರ ಭಾನುವಾರ) ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ ಟ್ರಸ್ಟ್ ಮತ್ತು ಸಾಯಿ ಮಿಲನ ಮೆಡಿಕಲ್ ಸೆಂಟರ್ ಇವರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಆರೋಗ್ಯ ಶಿಬಿರವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ. ಕೃಷಿ ಕೆಲಸದ ನಡುವೆ ವೈಯಕ್ತಿಕ ಆರೋಗ್ಯ ತಪಾಸಣೆ ಮೂಲಕ ನೆಮ್ಮದಿಯ ಜೀವನ ಸಾಗಿಸಬೇಕು ಎಂದರು.
ಎಲ್ಲರೂ ಆರೋಗ್ಯ ತಪಾಸಣೆಯನ್ನು ಕಡ್ಡಾಯವಾಗಿ ಮಾಡಿಸಲೇಬೇಕು. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಬಡವರು, ಮಧ್ಯಮ ವರ್ಗದವರು ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ನಂತರ ಮುಖಂಡರು ಮಾತನಾಡಿ, ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಲೇಸು. ಗ್ರಾಮೀಣ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿರುವುದು ಶ್ಲಾಘನೀಯ. ಗ್ರಾಮೀಣ ಭಾಗದ ಸಾಮಾನ್ಯ ಜನರು ದೂರದ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಲಾಗದ ಸ್ಥಿತಿಯಲ್ಲಿದ್ದು, ಇಂತಹ ಆರೋಗ್ಯ ತಪಾಸಣಾ ಶಿಬಿರಗಳಿಂದ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಲು ಸಾಧ್ಯ ಎಂದರು.
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಡಾ. ಜ್ಞಾನೇಶ್ವರಿ ಮತ್ತು ಡಾಕ್ಟರ್ ಜಯಕುಮಾರ್ ಅವರು ನೆರವೇರಿಸಿಕೊಟ್ಟರು.
ಈ ವೇಳೆ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಘಾಟಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ ಮಂಜುನಾಥ್ ನಾಗೇನಹಳ್ಳಿ, ಎಸ್ ಮಂಜುನಾಥ್ ಮೇಲೆಕೋಟೆ ಕ್ರಾಸ್, ಶ್ರೀನಿವಾಸ್ ಗೊಲ್ಲಹಳ್ಳಿ, ತೂಬಗೆರೆ ಹೋಬಳಿ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ನರಸಿಂಹಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…